Home » ಬೆಳ್ತಂಗಡಿ ತಾಲೂಕಿನ ಹಲವೆಡೆ ಧಾರ್ಮಿಕ ಮುಖಂಡ, ಶ್ರೀ ಕಿರಣ್ ಚಂದ್ರ ಡಿ. ಪುಷ್ಪಗಿರಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿ

ಬೆಳ್ತಂಗಡಿ ತಾಲೂಕಿನ ಹಲವೆಡೆ ಧಾರ್ಮಿಕ ಮುಖಂಡ, ಶ್ರೀ ಕಿರಣ್ ಚಂದ್ರ ಡಿ. ಪುಷ್ಪಗಿರಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿ

0 comments

ಬೆಳ್ತಂಗಡಿ ತಾಲೂಕಿನ ಹಲವೆಡೆ ಧಾರ್ಮಿಕ ಮುಖಂಡ, ಶ್ರೀ ಕಿರಣ್ ಚಂದ್ರ ಡಿ. ಪುಷ್ಪಗಿರಿ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಈ ಸಂದರ್ಭ ಯುವ ಸಮುದಾಯವನ್ನು ಅವರು ಬೆನ್ನು ತಟ್ಟಿ ಹುರಿದುಂಬಿಸಿದರು.

ಶ್ರೀ ಸರಸ್ವತಿ ಭಜನಾ ಮಂದಿರ, ಕುಂಟಲಾಪಲ್ಕೆ, ಬಂದಾರು ಇದರ ಬೆಳ್ಳಿ ಹಬ್ಬದ ಸಂಭ್ರಮಾಚರಣೆ ಮತ್ತು ಭಜನಾ ಕಮ್ಮಟೋತ್ಸವ ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡರು ಶ್ರೀ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರು ಭಾಗವಹಿಸಿದರು.

ಕೋಟಿ-ಚೆನ್ನಯ್ಯ ಫ್ರೆಂಡ್ಸ್ ಸೇವಾ ಟ್ರಸ್ಟ್ (ರಿ.) ಮರಿಪ್ಪಾದೆ, ಕರಾಯ -ಕಲ್ಲೇರಿ ಇಲ್ಲಿ ನಡೆದ ಹಗ್ಗಜಗ್ಗಾಟ ಪಂದ್ಯಾಟದಲ್ಲಿ ಶ್ರೀ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರು ಭಾಗವಹಿಸಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

banner

ನಾವೂರು ಬಡೆಕ್ಕಾವು ಗುತ್ತು ಇಲ್ಲಿ ಜರುಗಿದ ಧರ್ಮ ನೇಮೋತ್ಸವಕ್ಕೆ ಧಾರ್ಮಿಕ ಮುಖಂಡರು ಶ್ರೀ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರು ಭೇಟಿ ನೀಡಿ ಗಂಧ ಪ್ರಸಾದ ಸ್ವೀಕರಿಸಿ ಆಶೀರ್ವಾದ ಪಡೆದರು.

ಫ್ರೆಂಡ್ಸ್ ಮಾಚರ್ ಇದರ ವತಿಯಿಂದ ನಡೆದ ಹೊನಲು ಬೆಳಕಿನ ಸೌಹಾರ್ದ ವಾಲಿಬಾಲ್ ಪಂದ್ಯಾಕೂಟದಲ್ಲಿ ಶ್ರೀ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರು ಭಾಗವಹಿಸಿ ಶುಭ ಕೋರಿದರು.

You may also like