Home latest ಕಾರ್ಕಳ : ತಮ್ಮನ ಮನೆಗೆ ಬೆಂಕಿಯಿಟ್ಟು ಕಾರಿನೊಳಗೆ ಭಸ್ಮವಾದ ಅಣ್ಣ

ಕಾರ್ಕಳ : ತಮ್ಮನ ಮನೆಗೆ ಬೆಂಕಿಯಿಟ್ಟು ಕಾರಿನೊಳಗೆ ಭಸ್ಮವಾದ ಅಣ್ಣ

Hindu neighbor gifts plot of land

Hindu neighbour gifts land to Muslim journalist

ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯಲ್ಲಿ ಬರ್ಬರ ಕೃತ್ಯ.ತಮ್ಮನ ಮನೆಗೆ ಕೊಳ್ಳಿಯಿಟ್ಟು ತಾನೂ ಭಸ್ಮವಾದ.ಸಚ್ಚೇರಿಪೇಟೆಯ ಕೃಷ್ಣ ಸಪಳಿಗ ಎಂಬಾತ ತನ್ನ ತಮ್ಮ ಶೇಖರ ಸಪಳಿಗ ಎಂಬವರ ಮನೆಗೆ ತಡರಾತ್ರಿ 3 ಗಂಟೆಗೆ ಬೆಂಕಿಯಿಟ್ಟು ತನ್ನ ಓಮಿನಿಯಲ್ಲಿ ಕುಳಿತು ಅದಕ್ಕೂ ಬೆಂಕಿ ಹಾಕಿ ತಾನೂ ಸುಟ್ಟು ಭಸ್ಮವಾದ.ಶೇಖರನ ಮನೆಯಲ್ಲಿ ಕೃಷ್ಣ ಹಾಗೂ ಶೇಖರನ ಮಗಳ ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದು ಮೂರು ಗಂಟೆಗೆ ಕೃಷ್ಣ ಈ ಕೃತ್ಯ ಎಸಗಿದ್ದಾನೆ.ಜಮೀನು ವಿವಾದ ಈ ಘಟನೆಗೆ ಕಾರಣ ಎನ್ನಲಾಗಿತ್ತಿದೆ.ಅಗ್ನಿಶಾಮಕ ದಳದವರ ಸಹಿತ ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.