

Asaduddin Owaisi: ಭಾರತದಲ್ಲಿರುವ ಮುಸ್ಲಿಮರು ಎಂದಿಗೂ ಕೂಡ ಹಿಂದುಗಳ ಜನಸಂಖ್ಯೆಯನ್ನು ಮೀರಿಸುವುದಿಲ್ಲ ಎಂಬುದಾಗಿ ಮುಸ್ಲಿಂ ಮುಖಂಡ ಹಾಗೂ ಎಐಎಂಐಎಂ ಅಧ್ಯಕ್ಷ ಅಸಾದುದ್ಧೀನ್ ಓವೈಸಿ ಹೇಳಿದ್ದಾರೆ
ತೆಲಂಗಾಣದ ನಗರಸಭೆ ಚುನಾವಣೆಯ ಹಿನ್ನಲೆಯಲ್ಲಿ ಶುಕ್ರವಾರ ರಾತ್ರಿ ನಿಜಾಮಾಬಾದ್ನಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಓವೈಸಿ ದೇಶದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗುತ್ತಿದೆ ಎಂದು ಪ್ರಧಾನಿ ಭಾಷಣ ಮಾಡುತ್ತಿದ್ದಾರೆ. ಆದರೆ, ದೇಶದಲ್ಲಿ ಮುಸ್ಲಿಂ ಜನಸಂಖ್ಯೆ ಸ್ಥಿರವಾಗಿರಲಿದೆ ಎಂದು ಹೇಳಿದ್ದಾರೆ.
ಅಲ್ಲದೆ ಆರ್ಎಸ್ಎಸ್ ಮುಖ್ಯಸ್ಥರು ಮುಸ್ಲಿಂರನ್ನು ವಿರೋಧಿಸಿ, ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿಮಾಡಲು ಒತ್ತಾಯಿಸಿದ್ದರು. ನಂತರ, ಮೂರು ಮಕ್ಕಳಿಗೆ ಜನ್ಮನೀಡಿ ಎಂದು ಅವರು ಕರೆ ಕೊಟ್ಟಿದ್ದರು. ಆದರೆ, ಅದನ್ನು ಅವರೇ ಪಾಲಿಸಿಲ್ಲ. ಮೋದಿ ಅವರು ಜಗತ್ತಿನ ಜನಸಂಖ್ಯೆಯಲ್ಲಿ ಹೆಚ್ಚಿನ ಪಾಲು ಮುಪ್ಪಿನಂಚಿನಲ್ಲಿದ್ದಾರೆ. ಆದರೆ, ಭಾರತದಲ್ಲಿ ಶೇ 60ರಷ್ಟು ಜನರು 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಇದ್ದಾರೆ ಎಂದು ಹೇಳಿದ್ದರು. ಆದರೆ, ಅವರ ಉದ್ಯೋಗಕ್ಕಾಗಿ ಪ್ರಧಾನಿ ಮೋದಿ ಅವರು ಯಾವ ಕ್ರಮ ಕೈಗೊಂಡಿದ್ದಾರೆ, ಅವರ ಕೌಶಲ್ಯ ವೃದ್ಧಿಗೆ ಏನು ಮಾಡಿದ್ದಾರೆ ? ಎಂದು ಪ್ರಶ್ನಿಸಿದ್ದಾರೆ.













