ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಿರುವುದರಿಂದ ಇದರ ಬೆನ್ನಲ್ಲೇ ತೆರವಾಗಿದ್ದ ಪ್ರಮುಖ ಹುದ್ದೆ ಕೆಪಿಸಿಸಿ ಅಧ್ಯಕ್ಷಗಿರಿಗೆ ಹೈಕಮಾಂಡ್ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಕರ್ನಾಟಕ ರಾಜ್ಯ ಕಾಂಗ್ರೆಸ್ ಸಮಿತಿ ಆಯ್ಕೆ ಮಾಡಿದೆ. ಈ ಮೂಲಕ ಬಿ.ಕೆ.ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಸರ್ಪೈಸ್ ನೀಡಿದೆ ಎನ್ನಬಹುದು.


ಪಕ್ಷದ ಸಂಪುಟನೆಗೆ ಪೂರ್ಣ ಪ್ರಮಾಣದ ನಾಯಕರೊಬ್ಬರ ಅಗತ್ಯವಿತ್ತು. ಹಾಗಾಗಿ ಬಿ.ಕೆ. ಹರಿಪ್ರಸಾದ್ ಅವರ ಹಿರಿತನ ಜೊತೆಗೆ ಗಾಂಧಿ ಕುಟುಂಬ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿ ರಾಷ್ಟ್ರೀಯ ನಾಯಕರ ಜೊತೆ ದಶಕಗಳ ಕಾಲ ಅತ್ಯಂತ ನಿಕಟ ಮತ್ತು ಉತ್ತಮ ಬಾಂಧವ್ಯ ಹೊಂದಿರುವುದರಿಂದ ಅವರಿಗೆ ಈ ಜವಾಬ್ದಾರಿ ನೀಡಲಾಗಿದೆ.
ಈ ಮೂಲಕ ಪ್ರಸ್ತುತ ವಿಧಾನ ಪರಿಷತ್ ಸದಸ್ಯರಾಗಿರುವ ಹರಿಪ್ರಸಾದ್ ಅವರು ಇನ್ಮುಂದೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನೂ ಅಲಂಕರಿಸಲಿದ್ದಾರೆ. ಉಭಯ ಜವಾಬ್ದಾರಿಗಳನ್ನು ಬಿ.ಕೆ.ಹರಿಪ್ರಸಾದ್ ನಿಭಾಯಿಸಲಿದ್ದಾರೆ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಡುವಿನ ಸಮತೋಲನ ಕಾಯ್ದುಕೊಳ್ಳಲು ಹೈಕಮಾಂಡ್ ಹರಿಪ್ರಸಾದ್ ಅವರನ್ನು ರಾಜ್ಯಕ್ಕೆ ಕಳುಹಿಸಿದೆ ಎಂದು ಹೇಳಲಾಗುತ್ತಿದೆ.
