Home News ಬಡಗನ್ನೂರು : ದಲಿತ ಬಾಲಕಿಯ ಅತ್ಯಾಚಾರ, ಮಗುವಿಗೆ ಜನ್ಮ | ಆರೋಪಿ ನಾರಾಯಣ ರೈ ಜಾಮೀನು...

ಬಡಗನ್ನೂರು : ದಲಿತ ಬಾಲಕಿಯ ಅತ್ಯಾಚಾರ, ಮಗುವಿಗೆ ಜನ್ಮ | ಆರೋಪಿ ನಾರಾಯಣ ರೈ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

Hindu neighbor gifts plot of land

Hindu neighbour gifts land to Muslim journalist

ಪುತ್ತೂರು ತಾಲೂಕಿನ ಬಡಗನ್ನೂರಿನ ದಲಿತ ಬಾಲಕಿಯ ಅತ್ಯಾಚಾರ ಹಾಗೂ ಆಕೆ ಮಗುವಿಗೆ ಜನ್ಮನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪುತ್ತೂರು ನ್ಯಾಯಾಲಯ ಅ 22 ರಂದು ತಿರಸ್ಕರಿಸಿದೆ.

ಪುತ್ತೂರು ತಾಲೂಕಿನ ಸುಳ್ಯಪದವು ಸಮೀಪದ ಪಡವನ್ನೂರು ಗ್ರಾಮದ ಕುದ್ಕಾಡಿ ನಾರಾಯಣ ರೈ (73)ಯವರು ಜಾಮೀನು ಕೋರಿ ತನ್ನ ವಕೀಲರ ಮೂಲಕ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದು ವಿಚಾರಣೆ ನಡೆಸಿದ ಪುತ್ತೂರು 5 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಸಂತ್ರಸ್ತ ಬಾಲಕಿ (17) ತನ್ನ ಮೇಲೆ ನಿರಂತರ ಅತ್ಯಾಚಾರ ನಡೆದ ಬಗ್ಗೆ ದೂರು ನೀಡಿದ್ದು ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಠಾಣಾ ಅ.ಕ್ರ ಸಂಖ್ಯೆ : 80/21 ರಂತೆ ಪ್ರಕರಣ ದಾಖಲಾಗಿತ್ತು. ಐಪಿಸಿ ಸೆಕ್ಷನ್ 376(2), 506, ಪೊಕ್ಸ್ ಹಾಗೂ ದಲಿತ ದೌರ್ಜನ್ಯ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣದಡಿ ಒರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯೂ ಸೆ.5 ರಂದು ಮಗುವಿಗೆ ಜನ್ಮ ನೀಡಿದ್ದಳು.

ಸಂತ್ರಸ್ತೆಯೂ ನ್ಯಾಯಾಲಯದಲ್ಲಿ ನೀಡಿದ ಹೇಳಿಕೆಯಲ್ಲಿ ನಾರಾಯಣ ರೈ ಯವರ ಹೆಸರನ್ನು ಉಲ್ಲೇಖಿಸಿದ ಹಿನ್ನಲೆಯಲ್ಲಿ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು ಎನ್ನಲಾಗಿದೆ.

ಕುಂಬ್ರ : ಕಾಂಗ್ರೆಸ್-ಎಸ್‌ಡಿಪಿಐ ಕಾರ್ಯಕರ್ತರ ಹೊಡೆದಾಟ ,ಪೊಲೀಸರ ಆಗಮನ