

ದಾವಣಗೆರೆ: ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ದಾವಣಗೆರೆಯ ಭರತ್ ಕಾಲೋನಿಯ ಶೇಖರಪ್ಪ ಬಿ ಬ್ಲಾಕ್ ನಲ್ಲಿ 35 ವರ್ಷದ ಕೃಷ್ಣಾ ನಾಯ್ಕ್, ಪತ್ನಿ ಸುಮಾ ಮತ್ತು ಆರು ವರ್ಷದ ಮಗು ಧ್ರುವ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂಬಂಧಿಕರು ಸ್ಥಳಕ್ಕೆ ಆಗಮಿಸಿದ್ದು, ಅವರ ಅಕ್ರಂದನ ಮುಗಿಲು ಮುಟ್ಟಿದೆ.ಮಗು ಮತ್ತು ತನ್ನ ಪತ್ನಿಗೆ ವಿಷ ಕುಡಿಸಿ ಬಳಿಕ ಕೃಷ್ಣಾ ನಾಯ್ಕ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.