ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್ಗಳ ವಿಚಾರದಲ್ಲಿ ಪೊಲೀಸರು ತ್ವರಿತವಾಗಿ ಎಫ್ಐಆರ್ ದಾಖಲು ಮಾಡುತ್ತಿರುವುದನ್ನು ಪ್ರಶ್ನೆ ಮಾಡಿದ ಕರ್ನಾಟಕ ಹೈಕೋರ್ಟ್, ಗಂಭಿರ ಅಪರಾಧಗಳ ವಿರುದ್ಧ ಅದೇ ಮಟ್ಟದ ಕಠಿಣ ಕ್ರಮ ಕಾಣಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಬಂಟ್ವಾಳ ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳ ಹತ್ಯೆ ಪ್ರಕರಣಕ್ಕೆ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದು ಮಾಡುವಂತೆ ಕೋರಿ ಕಾನೂನು ವಿದ್ಯಾರ್ಥಿ ಕಿರಣ್ ಆರಾಧ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಕೋರ್ಟ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.
ವಾದ ಪ್ರತಿವಾದ ನಡೆದ ನಂತರ ಕೋರ್ಟ್, ಗಂಭೀರ ಅಪರಾಧಗಳ ತನಿಖೆಗಿಂತ ಸಾಮಾಜಿಕ ಜಾಲತಾಣದ ಪೋಸ್ಟ್ಗಳ ಮೇಲಿನ ಕ್ರಮಕ್ಕೆ ಏಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಪ್ರಶ್ನಿಸಿತು. ಜೊತೆಗೆ, ಪ್ರಕರಣದ ಸವಿಸ್ತಾರ ಪರಿಶೀಲನೆ ಪೂರ್ಣಗೊಳ್ಳುವವರೆಗೆ ಅರ್ಜಿದಾರರ ವಿರುದ್ಧದ ಮುಂದಿನ ತನಿಖೆಗೆ ತಾತ್ಕಾಲಿಕ ತಡೆ ನೀಡಿದೆ.
