Home » Banu Mushtaq: ಚಪ್ಪಲಿ ತೆಗೆಯದೆ ಅಂಬೇಡ್ಕರ್ ಗೆ ಪುಷ್ಪ ನಮನ ಸಲ್ಲಿಸಿದ ಬಾನು ಮುಷ್ತಾಕ್ – ಪ್ರಶ್ನಿಸಿದಕ್ಕೆ ‘ಚಪ್ಪಲಿ ನಮ್ಮ ಮನೆ ದೇವರು’ ಎಂದ ಲೇಖಕಿ

Banu Mushtaq: ಚಪ್ಪಲಿ ತೆಗೆಯದೆ ಅಂಬೇಡ್ಕರ್ ಗೆ ಪುಷ್ಪ ನಮನ ಸಲ್ಲಿಸಿದ ಬಾನು ಮುಷ್ತಾಕ್ – ಪ್ರಶ್ನಿಸಿದಕ್ಕೆ ‘ಚಪ್ಪಲಿ ನಮ್ಮ ಮನೆ ದೇವರು’ ಎಂದ ಲೇಖಕಿ

0 comments

Banu Mushtaq: ಬೂಕರ್‌ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಾನು ಮುಷ್ತಾಕ್ (Banu Mushtaq)​ ಅವರು ಕಾರ್ಯಕ್ರಮವೊಂದರಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ (Dr. B.R Ambedkar) ಭಾವಚಿತ್ರಕ್ಕೆ ಚಪ್ಪಲಿ ಧರಿಸಿಕೊಂಡೇ ಪುಷ್ಪ ನಮನ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲದೆ ಇದನ್ನು ಪ್ರಶ್ನಿಸಿದಕ್ಕೆ ಅವರು ನೀಡಿರುವ ಉತ್ತರ ವಿವಾದಕ್ಕೆ ಕಾರಣವಾಗಿದೆ. 

ಹೌದು, ನಗರದ ಅಂಬೇಡ್ಕರ್‌ ಭವನದಲ್ಲಿ, ರಾಜ್ಯ ದಲಿತ ಸಂಘರ್ಷ ಸಮಿತಿ, ಎಂ.ಬಿ.ಶ್ರೀನಿವಾಸ್‌ ಪ್ರತಿಷ್ಠಾಪನದ ವತಿಯಿಂದ ಆಯೋಜಿಸಲಾಗಿದ್ದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಜನಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಆದರೆ ಈ ವೇಳೆ ಅವರು ಚಪ್ಪಲಿ ಧರಿಸಿಕೊಂಡೇ ಅಂಬೇಡ್ಕರ್‌ ಅವರಿಗೆ ಪೂಜೆ ಸಲ್ಲಿಸಿದ್ದಾರೆ. 

ಭಾನು ಅವರು ಚಪ್ಪಲಿ ಹಾಕಿರುವುದನ್ನು ಗಮನಿಸಿದ ಕಾರ್ಯಕ್ರಮ ಸಂಘಟಕರು, ಚಪ್ಪಲಿಯನ್ನ ತೆಗೆದು ಪುಷ್ಪನಮನ ಮಾಡುವಂತೆ ಹೇಳಿದರು. ಆದರೆ ಬಾನುಮುಷ್ತಾಕ್‌ ಅವರು ಅದಕ್ಕೆ ಒಪ್ಪಲಿಲ್ಲ. ಹಾಗೇ, ಪುಷ್ಪನಮನ ಸಲ್ಲಿಸಿದ್ದಾರೆ. ಚಪ್ಪಲಿ ಹೊಲಿಯುವುದು ನಮ್ಮ ವೃತ್ತಿ. ಅದು ನಮ್ಮ ಮನೆ ದೇವರು. ನಮ್ಮ ಅಸ್ಮಿತೆಯ ಸಂಕೇತ, ನಾವು ಚಪ್ಪಲಿ ಹೊಲಿಯುವವರು. ನಮಗೆ ಅದರ ಬಗ್ಗೆ ಅಪಾರ ಗೌರವ ಇದೆ. ನಾನು ಚಪ್ಪಲಿ ಬಿಚ್ಚೋದಿಲ್ಲ ಎಂದು ಬಾನುಮುಷ್ತಾಕ್‌ ಹೇಳಿದ್ದಾರೆ. ಇದೀಗ ಈ ವಿಚಾರ ಪರ ವಿರೋಧ ಚರ್ಚೆಗಳಿಗೆ ಕಾರಣವಾಗಿದೆ. 

ಬಾನು ಅವರ ನಡೆಯನ್ನು ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರು ಕೂಡ ಖಂಡಿಸಿದ್ದಾರೆ. ಸಾಹಿತಿ ಬಾನು ಮುಷ್ತಾಕ್ ಅವರ ಈ ರೀತಿಯ ವರ್ತನೆಗೆ ಕಾಂಗ್ರೆಸ್ ಸರ್ಕಾರ ಕಾರಣ. ದಸರಾ ಉದ್ಘಾಟನೆಯ ಕುಮ್ಮಕಿನಿಂದ ಹೀಗೆ ಮಾಡುತ್ತಿದ್ದಾರೆ. ಬಾನು ಮುಷ್ತಾಕ್​​ರ ವರ್ತನೆ ಅಕ್ಷಮ್ಯ ಅಪರಾಧ, ಮುಷ್ತಾಕ್ ಅವರು ಬಹಿರಂಗವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ ಎಂದು ಪ್ರಮೋದ್​ ಮುತಾಲಿಕ್​ ಎಚ್ಚರಿಕೆ ನೀಡಿದ್ದಾರೆ.

banner

You may also like