ಭಾರತ ತಂಡದ ಮಾಜಿ ನಾಯಕ ಮತ್ತು ಟಿ20 ವಿಶ್ವಕಪ್ ವಿಜೇತ ತಂಡದ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಮಾರ್ಚ್ 15 ರಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ವಾರ್ಷಿಕ ನಮನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಲ್ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.

ಭಾರತೀಯ ಕ್ರಿಕೆಟ್ಗೆ ಅವರು ನೀಡಿದ ಅಗಾಧ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.
1990 ರ ದಶಕದ ದ್ವಿತೀಯಾರ್ಧದಲ್ಲಿ ಮತ್ತು 2000 ದಶಕವುದ್ದಕ್ಕೂ ಸಚಿನ್ ತೆಂಡೂಲ್ಕರ್, ಸೌರವ್ ಗಂಡುಲಿ, ವಿ ವಿ ಎಸ್ ಲಕ್ಷ್ಮಣ್ ಮತ್ತು ವೀರೇಂದ್ರ ಸೆಹ್ವಾಗ್ ಅವರಂತಹ ಶ್ರೇಷ್ಠ ಬ್ಯಾಟಿಂಗ್ ತಂಡದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ದ್ರಾವಿಡ್, ಅವರನ್ನು ಅತ್ಯುತ್ತಮ ಆಟಗಾರರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ.
ಬೆಂಗಳೂರು ಮೂಲದ ಬ್ಯಾಟ್ಸ್ಮನ್ ಲಾರ್ಡ್ಸ್ನಲ್ಲಿ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ರಾಹುಲ್ ದ್ರಾವಿಡ್, 53 ವರ್ಷದ ಆಟಗಾರ 344 ಏಕದಿನ ಪಂದ್ಯಗಳಲ್ಲಿ 10,889 ರನ್ ಗಳಿಸಿದ್ದಾರೆ, ಇದರಲ್ಲಿ 12 ಶತಕಗಳು ಮತ್ತು 83 ಅರ್ಧಶತಕಗಳು ಸೇರಿವೆ, ಇದು ಟೆಸ್ಟ್ ಮತ್ತು ಏಕದಿನ ಪಂದ್ಯಗಳಲ್ಲಿ 10,000 ಕ್ಕೂ ಹೆಚ್ಚು ರನ್ ಗಳಿಸಿದ ಕೆಲವೇ ಆಟಗಾರರಲ್ಲಿ ಒಂದಾಗಿದೆ.

