Home » ಭಾರತ ಟಿ20 ತಂಡಕ್ಕೆ ಹೊಸ ಕ್ಯಾಪ್ಟನ್ ಘೋಷಿಸಿದ BCCI!!

ಭಾರತ ಟಿ20 ತಂಡಕ್ಕೆ ಹೊಸ ಕ್ಯಾಪ್ಟನ್ ಘೋಷಿಸಿದ BCCI!!

0 comments

ಭಾರತದ ಟಿ20 ತಂಡದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ತಂಡದ ಹೊಸ ಕ್ಯಾಪ್ಟನ್ ಆಗಿ ಶ್ರೇಯಸ್ ಅಯ್ಯರನ್ನು ಬಿಸಿಸಿಐ ಅಧಿಕೃತವಾಗಿ ಘೋಷಿಸಿದೆ.

ಇತ್ತೀಚೆಗೆ ನಡೆದ ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಮಾರ್ಚ್ 2026 ರಲ್ಲಿ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡಿದ್ದರೂ ಸಹ, ಬ್ಯಾಟಿಂಗ್‌ನಲ್ಲಿ ಅವರ ವೈಯಕ್ತಿಕ ಫಾರ್ಮ್ ಕೈಕೊಟ್ಟಿರುವುದು ಈ ದಿಢೀರ್ ಬದಲಾವಣೆಗೆ ಕಾರಣವಾಗಿದೆ ಎನ್ನಲಾಗಿದೆ.

ಕಳೆದ 2025 ರಲ್ಲಿ, ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಜಯಿಸಿದ ಕೆಲವೇ ತಿಂಗಳುಗಳಲ್ಲಿ, ಆಸ್ಟ್ರೇಲಿಯಾ ಪ್ರವಾಸಕ್ಕೂ ಮುನ್ನ ರೋಹಿತ್ ಬದಲಿಗೆ ಶುಭ್‌ಮನ್ ಗಿಲ್ ಅವರನ್ನು ಏಕದಿನ ತಂಡದ ನಾಯಕರನ್ನಾಗಿ ಮಾಡಲಾಗಿತ್ತು.

ಶ್ರೇಯಸ್ ಅಯ್ಯರ್ ಅವರಿಗೆ ನಾಯಕತ್ವ ಸಿಗಲು ಕಾರಣವೇನು?

banner

ಬ್ಯಾಟಿಂಗ್‌ನಲ್ಲಿನ ಅವರ ಸ್ಥಿರ ಪ್ರದರ್ಶನ ಮಾತ್ರವಲ್ಲದೆ, ಇಂಡಿಯನ್ ಪ್ರೀಮಿಯರ್ ಲೀಗ್ (IPL) ನಲ್ಲಿ ಅವರ ಅತ್ಯುತ್ತಮ ನಾಯಕತ್ವದ ದಾಖಲೆಯನ್ನು ಪರಿಗಣಿಸಿ ಆಯ್ಕೆಗಾರರು ಶ್ರೇಯಸ್ ಅಯ್ಯರ್ ಅವರಿಗೆ ಈ ಜವಾಬ್ದಾರಿ ನೀಡಿದ್ದಾರೆ. ಐಪಿಎಲ್‌ನಲ್ಲಿ ಶ್ರೇಯಸ್ ಒಬ್ಬ ಚಾಣಾಕ್ಷ ನಾಯಕ ಎಂದು ಸಾಬೀತುಪಡಿಸಿದ್ದಾರೆ. ಅವರು 2024 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವನ್ನು ಚಾಂಪಿಯನ್ ಮಾಡಿದ್ದರು, ಹಾಗೂ 2020 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ಮತ್ತು 2025 ರಲ್ಲಿ ಪಂಜಾಬ್ ಕಿಂಗ್ಸ್ (PBKS) ತಂಡಗಳನ್ನು ಫೈನಲ್‌ಗೆ ಮುನ್ನಡೆಸಿದ್ದರು.

You may also like