ಬೆಳ್ತಂಗಡಿ: ನೀರಲ್ಲಿ ಈಜಲೆಂದು ಹೋದ ಯುವಕನೋರ್ವ ಆಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಕ್ಕಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸುಣ್ಣತ್ ಕೆರೆ ನಿವಾಸಿ ಇರ್ಫಾರ್ (19) ಮೃತ ಯುವಕ.

ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕೇಳ್ಕರ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನದಿಗೆ ಇರ್ಫಾನ್ ಮಾ.21 ರಂದು ಸಂಜೆ ನಾಲ್ಕು ಗಂಟೆಗೆ ಈಜಲೆಂದು ಹೋಗಿದ್ದು, ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾನೆ.
ನೀರಲ್ಲಿ ಮುಳುಗಿ ಕೆಲವೇ ಕ್ಷಣದಲ್ಲಿ ಸ್ಥಳೀಯ ಯುವಕರು ರಕ್ಷಣೆಗೆ ಧಾವಿಸಿದ್ದು, ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವಿಗೀಡಾಗಿದ್ದಾರೆ. ಘಟನಾ ಸ್ಥಳಕ್ಕೆ ವೇಣೂರು ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.
