Home » ಬೆಳ್ತಂಗಡಿ: ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್‌ ಮತ್ತು ಟಿಪ್ಪರ್‌ ಚಾಲಕರ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ: ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್‌ ಮತ್ತು ಟಿಪ್ಪರ್‌ ಚಾಲಕರ ವಿರುದ್ಧ ಪ್ರಕರಣ ದಾಖಲು

0 comments

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ಪಿಕಪ್‌ ಹಾಗೂ ಟಿಪ್ಪರ್‌ನಲ್ಲಿ ಶಾಲಾ ಮಕ್ಕಳನ್ನು ಅಧ್ಯಯನಕ್ಕೆ ಪ್ರವಾಸಕ್ಕೆ ಕರೆದುಕೊಂಡು ಹೋದ ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತು ಮಾಡಿರುವ ಬೆನ್ನಲ್ಲೇ ಈ ಪ್ರಕರಣ ಸಂಬಂಧ ವೇಣೂರು ಪೊಲೀಸ್‌ ಠಾಣೆಯಲ್ಲಿ ಎರಡು ವಾಹನ ಮತ್ತು ಚಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಫೆ.9 ರಂದು ಕೆಎ 21 8776 ಪಿಕಪ್‌ ಮತ್ತು ಕೆಎ 70 2596 ಟಿಪ್ಪರ್‌ ವಾಹನದಲ್ಲಿ ಮೂರು ಸಾವಿರ ಬಾಡಿಗೆ ನೀಡಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ನಾಲ್ಕೂರು ಅನಿಲ್‌ ಫಾರ್ಮ್‌ಗೆ ಕರೆದುಕೊಂಡು ಹೋಗಿ ವಾಪಸ್‌ ಕರೆದುಕೊಂಡು ಬರಲಾಗಿದ್ದ ವಿಡಿಯೋ ವೈರಲ್‌ ಆಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಬೆನ್ನಲ್ಲೇ, ವರದಿಯಾಗಿದ್ದು, ಫೆ.12 ರಂದು ಬೆಳ್ತಂಗಡಿ ಶಿಕ್ಷಣ ಇಲಾಖೆಯ ಮಂಗಳೂರು ಡಿಡಿಪಿಐ ಶಶಿಧರ್‌ ಜಿ ಎಸ್‌ ಅವರು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್‌ ಎನ್ನುವವರನ್ನು ಫೆ.12 ರಂದು ಅಮಾನತು ಮಾಡಿ ಆದೇಶ ಹೊರಡಿಸದ್ದರು.

You may also like