Home News ಬೆಳ್ತಂಗಡಿ: ಶಾಲಾ ಮಕ್ಕಳನ್ನು ಪಿಕಪ್‌ ಮತ್ತು ಟಿಪ್ಪರ್‌ನಲ್ಲಿ ಅಧ್ಯಯನಕ್ಕೆ ಕರೆದುಕೊಂಡು ಹೋದ ಮುಖ್ಯೋಪಾಧ್ಯಾಯರು

ಬೆಳ್ತಂಗಡಿ: ಶಾಲಾ ಮಕ್ಕಳನ್ನು ಪಿಕಪ್‌ ಮತ್ತು ಟಿಪ್ಪರ್‌ನಲ್ಲಿ ಅಧ್ಯಯನಕ್ಕೆ ಕರೆದುಕೊಂಡು ಹೋದ ಮುಖ್ಯೋಪಾಧ್ಯಾಯರು

Image Credit: TV9 Kannada

Hindu neighbor gifts plot of land

Hindu neighbour gifts land to Muslim journalist

ಬೆಳ್ತಂಗಡಿ: ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನ ಮಾಡಲು ತೆರೆದ ಪಿಕಪ್‌ ಮತ್ತು ಟಿಪ್ಪರ್‌ನಲ್ಲಿ ಕರೆದುಕೊಂಡು ಹೋದ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಬಳೆಂಜ ಗ್ರಾಮದಲ್ಲಿ ನಡೆದಿದೆ.

ಜೇನು ಕೃಷಿ ಅಧ್ಯಯನದ ಹೆಸರಿನಲ್ಲಿ ಸ್ಥಳೀಯ ನಾಲ್ಕೂರು ಬಳಿಯ ಅನಿಲ್‌ ಫಾರ್ಮ್‌ಗೆ ಇತ್ತೀಚೆಗೆ ಶತಮಾನೋತ್ಸವ ಕಾರ್ಯಕ್ರಮವನ್ನು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಳೆಂಜದ ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್‌ ಎನ್ನುವವರು ಫೆ.10 ರಂದು ಬೆಳಗ್ಗೆ ಶಾಲಾ ಮಕ್ಕಳನ್ನು ಪಿಕಪ್‌ ಮತ್ತು ಟಿಪ್ಪರ್‌ ವಾಹನದಲ್ಲಿ ಜೇನು ಕೃಷಿ ಅಧ್ಯಯನದ ಹೆಸರಲ್ಲಿ ಸ್ಥಳೀಯ ನಾಲ್ಕೂರು ಬಳಿಯ ಅನಿಲ್‌ ಫಾರ್ಮ್‌ಗೆ ಕರೆದುಕೊಂಡು ಹೋಗಿ ವಾಪಸ್‌ ಶಾಲೆಗೆ ಕರೆದುಕೊಂಡು ಬಂದಿದ್ದಾರೆ.

Image Credit: Tv9 Kannada

ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ವಿದ್ಯಾರ್ಥಿಗಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಪಿಕಪ್‌ ಮತ್ತು ಟಿಪ್ಪರ್‌ ಸೇರಿ ಸರಕು ಸಾಗಣೆ ವಾಹನದಲ್ಲಿ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗಲು ಮೋಟಾರು ಕಾಯ್ದೆ ಅಡಿಯಲ್ಲಿ ಅವಕಾಶವಿಲ್ಲದಿರುವಾಗ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಿರುವುದು ಏಕೆ ಅದಲ್ಲದೆ ಈ ರೀತಿ ಕರೆದುಕೊಂಡು ಹೋಗಿ ಮಕ್ಕಳಿಗೆ ಏನಾದರೂ ಅನಾಹುತ ನಡೆದರೆ ಯಾರು ಹೊಣೆ ಎಂದು ಮುಖ್ಯೋಪಾಧ್ಯಾಯ ಕಿರಣ್‌ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಕುರಿತು ಪೊಲೀಸ್‌ ಇಲಾಖೆ ಮುಖ್ಯೋಪಾಧ್ಯಾಯ ಕಿರಣ್‌ ಮತ್ತು ಎರಡು ವಾಹನ ಚಾಲಕರಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಟಿಪ್ಪರ್‌ ಹಾಗೂ ಪಿಕಪ್‌ ವಾಹನಗಳಲ್ಲಿ ಮಕ್ಕಳನ್ನು ಕೂರಿಸಿ ಕರೆದುಕೊಂಡು ಹೋಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಕಾನೂನು ಪ್ರಕಾರ, ಕೂಲಿ ಕಾರ್ಮಿಕರನ್ನೂ ಕೂಡ ಈ ರೀತಿಯ ವಾಹನಗಳಲ್ಲಿ ಕರೆದೊಯ್ಯುವಂತಿಲ್ಲ. ಹೀಗಿದ್ದೂ ವಿದ್ಯಾರ್ಥಿಗಳನ್ನೇ ಈ ರೀತಿಯಲ್ಲಿ ಕರೆದೊಯ್ದಿರುವುದು ಗಂಭೀರ ನಿರ್ಲಕ್ಷ್ಯವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.