5
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ, ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಕೇಶವ ಎಂ.


(46ವ) ಅವರು ಹೃದಯಾಘಾತ ಎ.16ರಂದು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕರಾಗಿದ್ದ ಇವರು, ಬೆಳ್ತಂಗಡಿ ತಾಲೂಕು ಪಂಚಾಯತಿನ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಕನ್ಯಾಡಿ ಸೇವಾ ಭಾರತಿ ಸಂಸ್ಥೆ ಸೇರಿದಂತೆ ಅನೇಕ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಕೊಂಡಿದ್ದರು.
ಅವಿವಾಹಿತರಾಗಿದ್ದ ಇವರು ಕುಟುಂಬ ವರ್ಗದವರನ್ನು ಅಗಲಿದ್ದಾರೆ.

