Home News Belthangady: ಧರ್ಮಸ್ಥಳದ ಯುವತಿ ಏರೋಸ್ಪೇಸ್‌ ಉದ್ಯೋಗಿ ಪಂಜಾಬ್‌ನಲ್ಲಿ ನಿಗೂಢ ಸಾವು

Belthangady: ಧರ್ಮಸ್ಥಳದ ಯುವತಿ ಏರೋಸ್ಪೇಸ್‌ ಉದ್ಯೋಗಿ ಪಂಜಾಬ್‌ನಲ್ಲಿ ನಿಗೂಢ ಸಾವು

Hindu neighbor gifts plot of land

Hindu neighbour gifts land to Muslim journalist

Belthangady: ಮೇ 17 ರಂದು ಸ್ಪೇಸ್‌ ಜೆಟ್‌ ಕಂಪನಿ ಉದ್ಯೋಗಿ ಧರ್ಮಸ್ಥಳದ ಅಕಾಂಕ್ಷ ಎಸ್‌.ಎನ್‌ (22) ಪಂಜಾಬ್‌ ನಲ್ಲಿ ನಿಗೂಢವಾಗಿ ಸಾವಿಗೀಡಾಗಿದ್ದಾರೆ.

ಇವರು ಧರ್ಮಸ್ಥಳ ಗ್ರಾಮದ ಬೊಳಿಯಾರು ನಿವಾಸಿ ಸಿಂಧೂ ದೇವಿ ಮತ್ತು ಸುರೇಂದ್ರ ದಂಪತಿಗಳ ಪುತ್ರಿ. ಎಲ್‌.ಪಿ.ಯು ಕಾಲೇಜು ಪಂಜಾಬ್‌ ಪಗುವಾರ ಜಲಂದರ್‌ನಲ್ಲಿ ಕಲಿತು ಸ್ಪೇಸ್‌ ಜೆಟ್‌ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದರು.

ಈಕೆ ಈ ದಂಪತಿಗಳ ಎರಡನೇ ಪುತ್ರಿ. ಪಂಜಾಬ್‌ನ ಎಲ್‌ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದಿದ್ದ ಈಕೆ, ಆರು ತಿಂಗಳ ಹಿಂದೆಯಷ್ಟೇ ಏರೋಸ್ಪೇಸ್‌ ಇಂಜಿನಿಯರ್‌ ಆಗಿ ದೆಹಲಿಯಲ್ಲಿ ಉದ್ಯೋಗ ಮಾಡುತ್ತಿದ್ದರು. ಜಪಾನ್‌ಗೆ ಉದ್ಯೋಗಕ್ಕೆ ಹೋಗುವ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಪಂಜಾಬ್‌ ಎಲ್‌.ಪಿಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್‌ ಪಡೆಯಲು ತೆರಳಿದ್ದರು, ಈ ಕುರಿತು ತನ್ನ ಮನೆಯವರಿಗೆ ಕರೆ ಮಾಡಿ ಹೇಳಿದ್ದರು ಎಂದು ತಿಳಿದು ಬಂದಿದೆ.

ಪಂಜಾಬ್‌ನ ಜಲಂದರ್‌ ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಮೇ 17 ರ ರಾತ್ರಿಯೇ ಮನೆ ಮಂದಿ ಪಂಜಾಬ್‌ಗೆ ತೆರಳಿದ್ದಾರೆ. ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಸಾವಿಗೀಡಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಪ್ರಕಾರ ತಿಳಿದು ಬಂದಿದೆ ಎಂದು ವರದಿಯಾಗಿದೆ. ಆದರೆ ತಮ್ಮ ಮಗಳನ್ನು ಕೊಲೆ ಮಾಡಲಾಗಿದೆ ಎಂದು ತಂದೆ ಆರೋಪ ಮಾಡುತ್ತಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.