Home » ಆ.11ರಿಂದ ಬೆಂಗಳೂರು-ಮಂಗಳೂರು ‘ವಂದೇ ಭಾರತ್’ ರೈಲು ಪ್ರಾಯೋಗಿಕ ಸಂಚಾರ!!

ಆ.11ರಿಂದ ಬೆಂಗಳೂರು-ಮಂಗಳೂರು ‘ವಂದೇ ಭಾರತ್’ ರೈಲು ಪ್ರಾಯೋಗಿಕ ಸಂಚಾರ!!

0 comments

ಕರಾವಳಿ ಭಾಗದ ರೈಲು ಪ್ರಯಾಣಿಕರ ಬಹುದಿನಗಳ ನಿರೀಕ್ಷೆಗೆ ಕೊನೆಗೂ ತೆರೆಬಿದ್ದಿದ್ದು, ಆಗಸ್ಟ್ 11 ರಿಂದ ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಅತ್ಯಾಧುನಿಕ ‘ವಂದೇ ಭಾರತ್ ಎಕ್ಸ್‌ಪ್ರೆಸ್’ ರೈಲಿನ ಪ್ರಾಯೋಗಿಕ ಸಂಚಾರವನ್ನು (Trial Run) ನಡೆಸಲು ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ.

ಇದಕ್ಕಾಗಿಯೇ ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ICF) ಯಿಂದ AEB ತಂತ್ರಜ್ಞಾನ ಹೊಂದಿರುವ 20 ಕೋಚ್‌ಗಳ ವಂದೇ ಭಾರತ್ ರೇಕ್ ಮೈಸೂರು ವಿಭಾಗಕ್ಕೆ ತಲುಪಿದೆ. ಪ್ರಸ್ತುತ ಈ ರೈಲನ್ನು ಮಂಡ್ಯ ಜಿಲ್ಲೆಯ ಪಾಂಡವಪುರ ರೈಲು ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. 

ಆಗಸ್ಟ್ 11ರಿಂದ ಆರಂಭವಾಗಲಿರುವ ಪ್ರಾಯೋಗಿಕ ಸಂಚಾರವು ಆಗಸ್ಟ್ 20ರವರೆಗೆ ನಡೆಯಲಿದೆ. ಭಾರತೀಯ ರೈಲ್ವೆಯ ಸಂಶೋಧನೆ, ವಿನ್ಯಾಸ ಮತ್ತು ಮಾನಕ ಸಂಸ್ಥೆಯ (RDSO) ತಂಡವು ಶೀಘ್ರದಲ್ಲೇ ಆಗಮಿಸಿ ಈ ಪರೀಕ್ಷಾರ್ಥ ಸಂಚಾರದ ಉಸ್ತುವಾರಿ ವಹಿಸಲಿದೆ ಎಂದು ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಮುದಿತ್ ಮಿತ್ತಲ್ ತಿಳಿಸಿದ್ದಾರೆ.

ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ(Somanna) ಅವರು ಜೂನ್ ತಿಂಗಳೊಳಗಾಗಿ ಈ ಮಾರ್ಗದಲ್ಲಿ ವಂದೇ ಭಾರತ್ ರೈಲು ಸೇವೆಯನ್ನು ಆರಂಭಿಸುವುದಾಗಿ ಈ ಹಿಂದೆ ತಿಳಿಸಿದ್ದರು. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಡುವಿನ ಅತ್ಯಂತ ಕಡಿದಾದ ಘಾಟ್ ಪ್ರದೇಶದಲ್ಲಿ ಕಡಿದಾದ ಇಳಿಜಾರು ಇರುವುದರಿಂದ, ಸಾಮಾನ್ಯ ರೈಲುಗಳಿಗೆ ಬ್ಯಾಂಕರ್ ಇಂಜಿನ್‌ಗಳನ್ನು ಜೋಡಿಸಬೇಕಿತ್ತು. ಆದರೆ ವಂದೇ ಭಾರತ್ ರೈಲಿನ ಸ್ವಯಂಚಾಲಿತ ವೇಗ ನಿಯಂತ್ರಣಕ್ಕಾಗಿ ಅತ್ಯಗತ್ಯವಾದ ಆಟೋಮ್ಯಾಟಿಕ್ ಎಮರ್ಜೆನ್ಸಿ ಬ್ರೇಕಿಂಗ್ (AEB) ತಂತ್ರಜ್ಞಾನ ಇಲ್ಲದ ಕಾರಣ ಸ್ಥಗಿತವಾಗಿತ್ತು.

banner

You may also like