Home » Bengaluru : ಮೊಬೈಲ್ ಕದಿಯಲೆಂದೇ ಬೆಂಗಳೂರಿಗೆ ವಿಮಾನದಲ್ಲಿ ಬರುತ್ತಿದ್ದ ಕಳ್ಳರು!!

Bengaluru : ಮೊಬೈಲ್ ಕದಿಯಲೆಂದೇ ಬೆಂಗಳೂರಿಗೆ ವಿಮಾನದಲ್ಲಿ ಬರುತ್ತಿದ್ದ ಕಳ್ಳರು!!

0 comments

Bengaluru : ಬೆಂಗಳೂರು ಸೇರಿದಂತೆ ಅನೇಕ ಮಹಾನಗರಗಳಲ್ಲಿ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿವೆ. ದಿನನಿತ್ಯವೂ ಚೈನು, ಮೊಬೈಲ್, ಪರ್ಸ್ ಸೇರಿದಂತೆ ಮುಂತಾದ ಬೆಲೆ ಬಾಳುವ ವಸ್ತುಗಳ ಕಳ್ಳತನದ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಕಳ್ಳ ಕಾಕರೆಂದರೆ ಹಾದಿ – ಬೀದಿಯಲ್ಲಿ ತಿರುಗಿಕೊಂಡಿರುವವರು ಇಂದು ನಾವು ಭಾವಿಸುತ್ತೇವೆ. ಆದರೆ ಇಲ್ಲೊಂದು ಗ್ಯಾಂಗ್ ಮೊಬೈಲ್ ಕದಿಯಲೆಂದೇ ಬೆಂಗಳೂರಿಗೆ ವಿಮಾನದಲ್ಲಿ ಬರುತ್ತಿದ್ದರು ಎಂಬ ವಿಚಾರ ಬಯಲಾಗಿದೆ.

ಹೌದು, ವಿಮಾನದ ಮೂಲಕ ನಗರಕ್ಕೆ ಬಂದು, ಮೊಬೈಲ್‌ ಕಳ್ಳತನ ಮಾಡಿಕೊಂಡು ಹೋಗಿದ್ದ ಪ್ರಕರಣವು ಪೊಲೀಸರ ಕಾರ್ಯಾಚರಣೆಯಲ್ಲಿ ಪತ್ತೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಜಯಚಂದ ಮತ್ತು ತರುಣ್ ಅವರನ್ನು ವೈಟ್‌ಫೀಲ್ಡ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. 

ಬಂಧಿತ ಕಳ್ಳರು ಇಬ್ಬರೂ ದೆಹಲಿಯಲ್ಲಿ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಅವರಿಂದ ವಿವಿಧ ಕಂಪನಿಯ 14 ಮೊಬೈಲ್‌ ಫೋನ್‌ ಜಪ್ತಿ ಮಾಡಲಾಗಿದೆ. ಮಹದೇವಪುರ ಅಪಾರ್ಟ್‌ಮೆಂಟ್‌ನಲ್ಲಿ ನೆಲಸಿದ್ದ ವ್ಯಕ್ತಿ ನೀಡಿದ ದೂರಿನ ಮೇಲೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಮೊಬೈಲ್​​ ಕಳವು ಮಾಡಲೆಂದೇ ವಿಮಾನದಲ್ಲಿ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದರು. ಅಲ್ಲಿಂದ ಕ್ಯಾಬ್‌ ಪಡೆದುಕೊಂಡು ನಗರಕ್ಕೆ ಬರುತ್ತಿದ್ದರು. ಬಂದವರು ನಗರದಲ್ಲಿ ಸುತ್ತಾಟ ನಡೆಸಿ ಐ-ಫೋನ್‌ ಹೊಂದಿರುವ ವ್ಯಕ್ತಿಗಳನ್ನು ಗುರುತಿಸುತ್ತಿದ್ದರು. ಐ-ಫೋನ್‌ ಮಾತ್ರ ಕಳ್ಳತನ ಮಾಡುತ್ತಿದ್ದರು. ಸಣ್ಣಪುಟ್ಟ ಮೊಬೈಲ್‌ ಮುಟ್ಟುತ್ತಿರಲಿಲ್ಲ. ಶ್ರೀಮಂತರು ನಡೆಸುವ ಪಾರ್ಟಿಗಳನ್ನು ಗುರುತಿಸಿ, ಅಲ್ಲಿಗೆ ತೆರಳುತ್ತಿದ್ದರು. ಅಲ್ಲಿ ದುಬಾರಿ ಬೆಲೆಯ ಫೋನ್‌ ಕಳ್ಳತನ ಮಾಡುತ್ತಿದ್ದರು’ ಎಂದು ತನಿಖೆಯಲ್ಲಿ ಬಯಲಾಗಿರುವುದಾಗಿ ಪೊಲೀಸರು ಹೇಳಿದ್ದಾರೆ.

banner

You may also like