Home » Mallikarjuna Muthya : ಮಲ್ಲಿಕಾರ್ಜುನ ಮುತ್ಯಾಗೆ ಕೋರ್ಟ್ ಬಿಗ್ ಶಾಕ್ – ಸರ್ಕಾರಿ ವಕೀಲರಿಂದ ಪ್ರಬಲ ವಾದ!!

Mallikarjuna Muthya : ಮಲ್ಲಿಕಾರ್ಜುನ ಮುತ್ಯಾಗೆ ಕೋರ್ಟ್ ಬಿಗ್ ಶಾಕ್ – ಸರ್ಕಾರಿ ವಕೀಲರಿಂದ ಪ್ರಬಲ ವಾದ!!

0 comments

Mallikarjuna Mutya: ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ವಿಚಾರವಾಗಿ ಉತ್ತರ ಕರ್ನಾಟಕ ಭಾಗದ ಮಲ್ಲಿಕಾರ್ಜುನ ಮುತ್ಯ ಅವರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಬಳಿಕ ಮುತ್ಯ ತಲೆಮರಿಸಿಕೊಂಡಿದ್ದರು. ನಂತರ ಮುತ್ಯ ಅವರು ತನಗೆ ಪೊಲೀಸರು ಬಳಿ ಸಿಲಿಂಡರ್ ಆಗಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಪೋಕ್ಸೋ (POCSO) ಪ್ರಕರಣದ ಪ್ರಮುಖ ಆರೋಪಿ ಮಲ್ಲಿಕಾರ್ಜುನ ಮುತ್ಯಾಗೆ ನ್ಯಾಯಾಲಯದಿಂದ ಭಾರಿ ಹಿನ್ನಡೆಯಾಗಿದೆ. ಜಾಮೀನು ಸಿಗುವ ಭರವಸೆಯಲ್ಲಿದ್ದ ಮುತ್ಯಾ ಮತ್ತು ಆತನ ಭಕ್ತರಿಗೆ ಯಾದಗಿರಿ ಜಿಲ್ಲಾ ಪ್ರಧಾನ ನ್ಯಾಯಾಲಯವು ಜಾಮೀನು ನಿರಾಕರಿಸುವ ಮೂಲಕ ಶಾಕ್ ನೀಡಿದೆ.

ಕಳೆದ ಕೆಲವು ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಮಲ್ಲಿಕಾರ್ಜುನ ಮುತ್ಯಾ, ತನ್ನ ಬಿಡುಗಡೆಗಾಗಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ಯಾದಗಿರಿ ಜಿಲ್ಲಾ ಪ್ರಧಾನ ನ್ಯಾಯಾಲಯವು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದಾಗಿ ಮುತ್ಯಾ ಸದ್ಯಕ್ಕೆ ಜೈಲಿನಲ್ಲೇ ಉಳಿಯುವಂತಾಗಿದೆ.

ಸರ್ಕಾರಿ ವಕೀಲರ ಪ್ರಬಲ ವಾದ:

ವಿಚಾರಣೆ ವೇಳೆ ಸರ್ಕಾರಿ ವಕೀಲರು ಮುತ್ಯಾನಿಗೆ ಜಾಮೀನು ನೀಡದಂತೆ ಅತ್ಯಂತ ಪ್ರಬಲವಾದ ವಾದ ಮಂಡಿಸಿದರು. ‘ಅಪ್ರಾಪ್ತ ಬಾಲಕಿಯೊಂದಿಗೆ ನಡೆಸಿರುವ ಅನುಚಿತ ವರ್ತನೆಯು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಆರೋಪಿಯು ಪ್ರಭಾವಿಯಾಗಿದ್ದು, ಜಾಮೀನಿನ ಮೇಲೆ ಹೊರಬಂದಲ್ಲಿ ಸಾಕ್ಷ್ಯನಾಶ ಮಾಡುವ ಅಥವಾ ಸಂತ್ರಸ್ತೆಯ ಮೇಲೆ ಒತ್ತಡ ಹೇರುವ ಸಾಧ್ಯತೆಯಿದೆ’ ಎಂದು ಸರ್ಕಾರಿ ಪರ ವಕೀಲರು ನ್ಯಾಯಾಲಯದ ಗಮನಕ್ಕೆ ತಂದರು. ಈ ವಾದವನ್ನು ಪುರಸ್ಕರಿಸಿದ ನ್ಯಾಯಾಧೀಶರು ಜಾಮೀನು ನೀಡಲು ನಿರಾಕರಿಸಿದ್ದಾರೆ.

banner

ವಿಚಾರಣೆ ವೇಳೆ ಮಲ್ಲಿಕಾರ್ಜುನ ಮುತ್ಯಾನ ಮೊಬೈಲ್ ಫೋನ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಮೊಬೈಲ್‌ನಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಡಿಜಿಟಲ್ ಸಾಕ್ಷ್ಯಗಳು ಸಿಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಮೊಬೈಲ್‌ನಲ್ಲಿರುವ ಸಂದೇಶಗಳು, ಕರೆ ದಾಖಲೆಗಳು ಅಥವಾ ವಿಡಿಯೋಗಳ ಬಗ್ಗೆ ತನಿಖಾ ತಂಡವು ತಾಂತ್ರಿಕ ಪರಿಶೀಲನೆ ನಡೆಸುತ್ತಿದೆ.

ಏನಿದು ಪ್ರಕರಣ?

ಅಪ್ರಾಪ್ತ ಬಾಲಕಿ ಜೊತೆ ಅನುಚಿತ ವರ್ತನೆ ತೋರಿದ ಆರೋಪದಡಿ ಕರ್ನಾಟಕ ಮಾತ್ರವಲ್ಲದೇ ಹೊರ ರಾಜ್ಯಗಳಲ್ಲಿಯೂ ಅಪಾರಭಕ್ತರನ್ನು ಹೊಂದಿರುವ ಶಹಪುರ ತಾಲೂಕಿನ ಮಹಲ್ ರೋಜಾದ ಸ್ವಾಮೀಜಿ ಮಲ್ಲಿಕಾರ್ಜುನ ಮುತ್ಯಾ ವಿರುದ್ದ 75(2) ಬಿಎನ್‌ಎಸ್‌ ಅಡಿಯಲ್ಲಿ ಕೇಸ್ ದಾಖಲಿಸಲಾಗಿತ್ತು. ಅಪ್ರಾಪ್ತ ಮಗುವಿನ ಜತೆ ಮಲ್ಲಿಕಾರ್ಜುನ ಮುತ್ಯಾ ಅನುಚಿತವಾಗಿ ವರ್ತಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸುಂಬೆ ದೂರು ದಾಖಲಿಸಲು ಸೂಚಿಸಿದ್ದರು. ಇದರ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮಹಲ್ ರೋಜಾಗೆ ಹೋಗಿ ತನಿಖೆ ನಡೆಸಿದ್ದರು. ಈ ಬೆನ್ನಲ್ಲೇ ಮುತ್ಯಾ ತಲೆಮರೆಸಿಕೊಂಡಿದ್ದರು. ಬಳಿಕ ಅವರೇ ತಾನಾಗಿ ಬಂದು ಪೊಲೀಸರಿಗೆ ಸಿಲಿಂಡರ್ ಆಗಿದ್ದರು. ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನವನ್ನು ವಿಧಿಸಿತ್ತು.

You may also like