Home Education ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ ಉನ್ನತ ಶಿಕ್ಷಣ ಸಚಿವರು!

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ ಉನ್ನತ ಶಿಕ್ಷಣ ಸಚಿವರು!

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವರು ಬಿಗ್ ಶಾಕ್ ನೀಡಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರುವಂತೆ ರಾಜ್ಯದಲ್ಲಿ ಇಂಜಿನಿಯರಿಂಗ್ ವ್ಯಾಸಂಗದ ಶುಲ್ಕವನ್ನು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.

ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದಂತ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ, ಬಿಇ ಇಂಜಿನಿಯರಿಂಗ್ ಕಾಲೇಜು ವ್ಯಾಂಸಗದ ಶುಲ್ಕವನ್ನು ಶೇ.10ರಷ್ಟು ಹೆಚ್ಚಳ ಮಾಡಲಾಗುತ್ತಿದೆ. ಈ ಬಗ್ಗೆ ಇಂಜಿನಿಯರಿಂಗ್ ಕಾಲೇಜುಗಳ ಜೊತೆಗೆ ಚರ್ಚಿಸಲಾಗಿದ್ದು, ಇದರ ಹೊರತಾಗಿ ವಿದ್ಯಾರ್ಥಿಗಳಿಂದ ಹೆಚ್ಚುವರಿ ಹಣ ಪಡೆಯಬಾರದು. ನಿರ್ದಿಷ್ಟ ಶುಲ್ಕ ಮಾತ್ರ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದರು.

ಈವರೆಗೆ ಸರ್ಕಾರಿ ಸೀಟುಗಳಿಗೆ ಮಾತ್ರವೇ ಸಿಇಟಿ ಪರೀಕ್ಷೆ ನಡೆಸಲಾಗುತ್ತಿತ್ತು. ಖಾಸಗಿ ಸೀಟುಗಳ ಭರ್ತಿಗೆ ಕಾಮೆಡ್-ಕೆ ಪರೀಕ್ಷೆ ನಡೆಸಲಾಗುತ್ತಿತ್ತು. ಇದೀಗ ಎರಡನ್ನು ಒಟ್ಟಿಗೆ ನಡೆಸಲು ಸಮ್ಮತಿ ನೀಡಲಾಗಿದೆ. ಹೀಗಾಗಿ ಹೇಗೆ ಪರೀಕ್ಷೆ ನಡೆಸಬೇಕು ಎನ್ನುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ. ಮುಂದಿನ ವರ್ಷದಿಂದ ಸಿಇಟಿ ಮಾತ್ರ ಇರಲಿದ್ದು, ಈ ಬಗ್ಗೆ ಒಡಂಬಡಿಕೆ ಆಗಲಿದೆ ಎಂದರು.