ರಾಜ್ಯ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರೆಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯ ಅತ್ಯಂತ ಪ್ರಮುಖವಾದದ್ದು. ಈ ಯೋಜನೆಯಡಿ ರಾಜ್ಯದ ಪ್ರತಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ಕೊಡಮಾಡಲಾಗುತ್ತದೆ. ಆದರೆ ಇಂದು ಅನೇಕ ಕುಟುಂಬಗಳು ಈ ಹಣವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಅಂದರೆ ಮೃತಪಟ್ಟವರು ಮತ್ತು ತೆರಿಗೆ ಪಾವತಿದಾರರು ಸೇರಿದಂತೆ ಸಾವಿರಾರು ಅನರ್ಹರನ್ನು ಪತ್ತೆಹಚ್ಚಿದ ನಂತರ, ಅರ್ಹ ಮಹಿಳೆಯರಿಗೆ ಮಾತ್ರ ಹಣ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ಬಯೋಮೆಟ್ರಿಕ್ ಕಡ್ಡಾಯಗೊಳಿಸಿದೆ.


‘ಗೃಹಲಕ್ಷ್ಮಿ’ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಈಗ ಮೇಜರ್ ಸರ್ಜರಿಗೆ ಮುಂದಾಗಿದೆ. ಪ್ರಸ್ತುತ ಇಡೀ ರಾಜ್ಯದಲ್ಲಿ ಸುಮಾರು ಒಂದು ಕೋಟಿ ಮೂವತ್ತು ಲಕ್ಷಕ್ಕೂ ಅಧಿಕ ಮಹಿಳಾ ಫಲಾನುಭವಿಗಳು ಈ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳ ಆರ್ಥಿಕ ನೆರವನ್ನು ಪಡೆಯುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಯೋಜನೆಯ ಅನುಷ್ಠಾನದಲ್ಲಿ ಕಂಡುಬಂದಿರುವ ಕೆಲವು ಗಂಭೀರ ಲೋಪದೋಷಗಳು ಹಾಗೂ ನಕಲಿ ಅರ್ಹತೆಗಳ ಹಾವಳಿಗೆ ಶಾಶ್ವತವಾಗಿ ಬ್ರೇಕ್ ಹಾಕಲು ಸರ್ಕಾರವು ಇನ್ಮುಂದೆ ಬಯೋಮೆಟ್ರಿಕ್ ಪ್ರಕ್ರಿಯೆಯನ್ನು ಕಡ್ಡಾಯಗೊಳಿಸಲು ಕಠಿಣ ನಿರ್ಧಾರ ಕೈಗೊಂಡಿದೆ.
ಬಯೋಮೆಟ್ರಿಕ್ ಮಾಡಿಸೋದು ಹೇಗೆ?
1.ಗೃಹಲಕ್ಷ್ಮಿ ದುರಪಯೋಗ ತಡೆಗೆ ಬಯೋಮೆಟ್ರಿಕ್
2.ಬೆಂಗಳೂರು ಒನ್, ಗ್ರಾಮ ಒನ್ಗಳಲ್ಲಿ ಬಯೋಮೆಟ್ರಿಕ್ಗೆ ಅವಕಾಶ ಸಾಧ್ಯತೆ
3.ಒನ್ ಟೈಂ ಬಯೋಮೆಟ್ರಿಕ್: ಒಂದು ಸಲ ಬಯೋಮೆಟ್ರಿಕ್ ನೀಡಿದ್ರೆ ವ್ಯಕ್ತಿಯ ಖಚಿತತೆಯಿಂದ 2 ಸಾವಿರ ರೂ. ಪಾವತಿ
4.ಗ್ರಾಮ ಒನ್, ಬೆಂಗಳೂರು ಒನ್, ಸೇವಾಸಿಂಧು ಕೇಂದ್ರಗಳಿಗೆ ತೆರಳಿ ಬಯೋಮೆಟ್ರಿಕ್ ನೀಡಬೇಕು
5.ಗೃಹಲಕ್ಷ್ಮಿ ಬಯೋಮೆಟ್ರಿಕ್ಗೆ 5 ರೂ. ಶುಲ್ಕವನ್ನ ಮಹಿಳಾ ಇಲಾಖೆ ನಿಗದಿ ಮಾಡಲಿದೆ
6.ಬಯೋಮೆಟ್ರಿಕ್ಗೆ ಫಲಾನುಭವಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು

