ಪಶ್ಚಿಮ ಬಂಗಾಳದ 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯು ಭರ್ಜರಿ ಗೆಲುವನ್ನು ಸಾಧಿಸಿದೆ. ಈ ಮೂಲಕ ದೀದಿಕೋಟೆ ಮೋದಿ ಕೋಟೆ ನಿರ್ಮಾಣವಾಗುತ್ತಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ಬೆಂಬಲಿಗರು ಮತ್ತು ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ದಾರೆ. ಇದರ ನಡುವೆ ಪಶ್ಚಿಮ ಬಂಗಾಳದಲ್ಲಿ ಮಾನವೀಯತೆ ಮೆರೆದ ಘಟನೆಯೊಂದು ನಡೆದಿದೆ.


ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಕಾರ್ಯಕರ್ತರ ಸಂಭ್ರಮದ ಮೆರವಣಿಗೆ ಸಮಯದಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರ ಅಂತ್ಯಕ್ರಿಯೆಯ ಮೆರವಣಿಗೆಯೊಂದು ಬರುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಸ್ಥಗಿತಗೊಳಿಸಿದ್ದಾರೆ. ಸದ್ಯ ಈ ವಿಡಿಯೊಗೆ (Viral News)ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.
ವಿಡಿಯೊದಲ್ಲಿ ಬಿಜೆಪಿ ಕಾರ್ಯಕರ್ತರು ಬೀದಿಗಳಲ್ಲಿ ತಮ್ಮ ವಿಜಯವನ್ನು ಆಚರಿಸುತ್ತಿರುವುದನ್ನು ಕಾಣಬಹುದು. ಡೋಲು, ತಮಟೆ ಹಾಗೂ ಘೋಷ ವಾಕ್ಯಗಳೊಂದಿಗೆ ಇಡೀ ವಾತಾವರಣ ಹಬ್ಬದಿಂದ ಕೂಡಿತ್ತು. ಈ ಸಂಭ್ರಮದ ಮೆರವಣಿಗೆ ಸಾಗುತ್ತಿದ್ದ ರಸ್ತೆಯಲ್ಲೇ ಅಂತ್ಯಕ್ರಿಯೆಯ ಮೆರವಣಿಗೆವೊಂದು ಹಾದುಹೋಗಿದೆ. ಕಾರ್ಯಕರ್ತರು ಈ ಮೆರವಣಿಗೆಯನ್ನು ನೋಡಿದ ತಕ್ಷಣ, ತಮ್ಮ ಸಂಭ್ರಮಾಚರಣೆ ನಿಲ್ಲಿಸಿ ಹಾದುಹೋಗಲು ದಾರಿ ಮಾಡಿ ಕೊಟ್ಟಿದ್ದಾರೆ. ಬಿಜೆಪಿ ಕಾರ್ಯಕರ್ತರ ಈ ನಡೆಗೆ ದೇಶಾದ್ಯಂತ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.
https://x.com/i/status/2051527024267997336

