Home News Chamarajanagara: ‘ಮಗುವಿಗೆ ಜ್ವರ, ಸೌತೆಕಾಯಿ ತಿನ್ನಿಸಬೇಡ’ ಎಂದ ತಂಗಿಯನ್ನು ಕೊಚ್ಚಿ ಕೊಲೆಗೈದ ಪಾಪಿ ಅಣ್ಣ!!

Chamarajanagara: ‘ಮಗುವಿಗೆ ಜ್ವರ, ಸೌತೆಕಾಯಿ ತಿನ್ನಿಸಬೇಡ’ ಎಂದ ತಂಗಿಯನ್ನು ಕೊಚ್ಚಿ ಕೊಲೆಗೈದ ಪಾಪಿ ಅಣ್ಣ!!

Hindu neighbor gifts plot of land

Hindu neighbour gifts land to Muslim journalist

Chamarajanagara: ಜ್ವರ ಬಂದ ಮಗುವಿಗೆ ಸೌತೆಕಾಯಿ ತಿನ್ನಿಸಬೇಡ ಎಂದು ಅಣ್ಣನಿಗೆ ಹೇಳಿದ್ದಕ್ಕೆ ಅಣ್ಣನು ತನ್ನ ತಂಗಿಯನ್ನು ಕೊಚ್ಚಿ ಕೊಲೆಗೈದ ಭೀಕರ ಘಟನೆಯೊಂದು ಚಾಮರಾಜನಗರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಹೌದು, ಚಾಮರಾಜನಗರದ ಜಿಲ್ಲೆಯ ಕೊಳ್ಳೇಗಾಲದ ಈದ್ಗಾ ಮೊಹಲ್ಲಾದಲ್ಲಿ ಈ ಅಮಾನುಷ ಘಟನೆ ನಡೆದಿದೆ. ಜ್ವರ ಬಂದಿದ್ದ ಮಗುವಿಗೆ ಸೌತೆಕಾಯಿ ತಿನ್ನಿಸಬೇಡ ಎಂದಿದ್ದೇ ಕಲಹಕ್ಕೆ ಕಾರಣ. ಇದರಿಂದ ಕೋಪಗೊಂಡ ವ್ಯಕ್ತಿ ಎಲ್ಲರಿಗೂ ಚಾಕುವಿನಿಂದ ಇರಿದಿರುವುದಾಗಿ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಚಾಕು ಇರಿತಕ್ಕೊಳಗಾದ ಐಮಾನ್ ಬಾನು(26) ಸ್ಥಳದಲ್ಲೇ ಮೃತಪಟ್ಟರೆ, ಸೈಯದ್(60) ಮತ್ತು ತಸ್ಲಿಮಾ ತಾಜ್(25) ಗಂಭೀರವಾಗಿ ಗಾಯಗೊಂಡು ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಕು ಇರಿದ ಫರ್ಮಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಅಷ್ಟಕ್ಕೂ ಆಗಿದ್ದೇನು?
ಫರ್ಮಾನ್ ತನ್ನ ಅಣ್ಣನ ಮಗಳಿಗೆ ಸೌತೆಕಾಯಿ ತಿನ್ನಿಸುತ್ತಿದ್ದಾಗ ಸಹೋದರಿ ಐಮಾನ್ ಬಾನು, ಜ್ವರ ಬಂದಿರುವ ಮಗುವಿಗೆ ಸೌತೆಕಾಯಿ ಏಕೆ ತಿನ್ನಿಸುತ್ತಿದ್ದಿಯಾ ಎಂದು ಪ್ರಶ್ನಿಸಿದ್ದಾರೆ. ನಂತರ ಮಾತಿಗೆ ಮಾತು ಬೆಳೆದು ಐಮಾನ್​ ಅವರಿಗೆ ಚಾಕುವಿನಿಂದ ಕುತ್ತಿಗೆಗೆ ಇರಿದಿದ್ದಾನೆ. ಬಳಿಕ, ತಂದೆ ಸೈಯದ್ ಮತ್ತು ಅತ್ತಿಗೆಗೂ ಇರಿದಿದ್ದಾನೆ. ಗಲಾಟೆಯಲ್ಲಿ ಸೈಯದ್​ ಅವರ ಕೈ ಕೂಡಾ ಮುರಿದಿದೆ.