Home News ಕಟ್ಟಡ ನಿರ್ಮಾಣದ ವೇಳೆ ಮಣ್ಣು ಕುಸಿತ!! ನಾಲ್ವರು ಕಾರ್ಮಿಕರು ಮೃತ್ಯು-ಉಳಿದವರಿಗಾಗಿ ಶೋಧ

ಕಟ್ಟಡ ನಿರ್ಮಾಣದ ವೇಳೆ ಮಣ್ಣು ಕುಸಿತ!! ನಾಲ್ವರು ಕಾರ್ಮಿಕರು ಮೃತ್ಯು-ಉಳಿದವರಿಗಾಗಿ ಶೋಧ

Hindu neighbor gifts plot of land

Hindu neighbour gifts land to Muslim journalist

ಕಟ್ಟಡ ನಿರ್ಮಾಣದ ವೇಳೆ ಮಣ್ಣು ಕುಸಿದು ಅವಶೇಷಗಳಡಿ ಸಿಲುಕಿ ನಾಲ್ವರು ಕಾರ್ಮಿಕರು ದುರ್ಮರಣ ಹೊಂದಿದ ಘಟನೆಯು ಕೇರಳದ ಕೊಚ್ಚಿಯ ಇಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.

ವಲಸೆ ಕಾರ್ಮಿಕರ ತಂಡವೊಂದು ಇಲ್ಲಿನ ಕಟ್ಟಡವೊಂದರ ಕಾಮಗಾರಿಯಲ್ಲಿ ತೊಡಗಿದ್ದರು. ಈ ವೇಳೆ ಏಕಾಏಕಿ ಮಣ್ಣು ಕುಸಿದಿದ್ದು, ಘಟನೆಯಿಂದಾಗಿ ಐವರು ಮಣ್ಣಿನಡಿ ಸಿಲುಕಿದ್ದರು.

ಬಳಿಕ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಹಾಗೂ ಸ್ಥಳೀಯರು ನಾಲ್ವರ ಮೃತದೇಹವನ್ನು ಹೊರತೆಗೆದಿದ್ದು,ಉಳಿದವರ ಕುರುಹುಗಳು ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ.