Home News ಚಾಲಕನ ಅಜಾಗರೂಕತೆಯಿಂದ ಪ್ರಪಾತಕ್ಕೆ ಉರುಳಿದ ಬಸ್ !! | 7 ಮಂದಿ ಸಾವು, 45 ಜನರಿಗೆ...

ಚಾಲಕನ ಅಜಾಗರೂಕತೆಯಿಂದ ಪ್ರಪಾತಕ್ಕೆ ಉರುಳಿದ ಬಸ್ !! | 7 ಮಂದಿ ಸಾವು, 45 ಜನರಿಗೆ ಗಾಯ

Hindu neighbor gifts plot of land

Hindu neighbour gifts land to Muslim journalist

ಇತ್ತೀಚೆಗೆ ದೇಶದಲ್ಲಿ ಖಾಸಗಿ ಬಸ್ಸುಗಳ ಅಪಘಾತಗಳು ಹೆಚ್ಚಾಗಿ ನಡೆಯುತ್ತಿದೆ. ಹಾಗೆಯೇ ಇಲ್ಲಿ ‌ಬಸ್ಸೊಂದು ಪ್ರಪಾತಕ್ಕೆ ಉರಳಿದ ಪರಿಣಾಮ 7 ಮಂದಿ ಸಾವನ್ನಪ್ಪಿ 45 ಮಂದಿ ಗಾಯಗೊಂಡ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ.

ಈ ಘಟನೆ ಶನಿವಾರ ರಾತ್ರಿ ನಡೆದಿದ್ದು, ಚಾಲಕನ ಅಜಾಗರೂಕತೆಯೇ ಈ ಅವಘಢಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ತಿರುಪತಿಯಿಂದ 25 ಕಿ.ಮೀ ದೂರದಲ್ಲಿರುವ ಬಕರಪೇಟ್ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ.

ಘಟನೆ ಬಗ್ಗೆ ತಿರುಪತಿಯ ಪೊಲಿಸರೊಬ್ಬರು ಪ್ರತಿಕ್ರಿಯಿಸಿ, ಚಾಲಕನ ಅಜಾಗರೂಕತೆಯಿಂದ ಬಸ್ ಪ್ರಪಾತಕ್ಕೆ ಉರುಳಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.