Home News Death: ಬೈಂದೂರು: ಬೈಕ್ ಚರಂಡಿಗೆ ಬಿದ್ದು ರೈಲ್ವೆ ನೌಕರ ಮೃತ್ಯು!

Death: ಬೈಂದೂರು: ಬೈಕ್ ಚರಂಡಿಗೆ ಬಿದ್ದು ರೈಲ್ವೆ ನೌಕರ ಮೃತ್ಯು!

Hindu neighbor gifts plot of land

Hindu neighbour gifts land to Muslim journalist

Death: ಕೊಂಕಣ ರೈಲ್ವೆ ಇಂಜಿನಿಯರ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬಂದಿ ಕರ್ತವ್ಯ ಮುಗಿಸಿ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ಬೆಳಕೆ ಸೊಸೈಟಿಯ ಹತ್ತಿರದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಗಟಾರಕ್ಕೆ ಬಿದ್ದ ಪರಿಣಾಮ ಮೃತಪಟ್ಟಿದ್ದಾರೆ (death).

ಬೈಂದೂರು ಬಾಡ ನಿವಾಸಿ ಗಣಪಯ್ಯ ಶೇರುಗಾರ ಅವರ ಪುತ್ರ ಸಂಜಯ ಕುಮಾರ (52) ಕೊಂಕಣ ರೈಲ್ವೇಯಲ್ಲಿ ಎಂಜಿನಿಯರಿಂಗ್ ವಿಭಾಗದಲ್ಲಿ ಟ್ರಾಕ್‌ಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಅವರು ರಾತ್ರಿ ಪಾಳಿ ಕರ್ತವ್ಯ ಮುಗಿಸಿ ಬೆಳಗ್ಗೆ 7 ಗಂಟೆಯ ಸುಮಾರಿಗೆ ಭಟ್ಕಳದಿಂದ ಬೈಂದೂರು ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಈ ಕುರಿತು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.