HomeNewsC M Siddaramaiah: ನಿರ್ಬಂಧ ಕೇವಲ RSSಗೆ ಮಾತ್ರವಲ್ಲ, ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

C M Siddaramaiah: ನಿರ್ಬಂಧ ಕೇವಲ RSSಗೆ ಮಾತ್ರವಲ್ಲ, ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Hindu neighbor gifts plot of land

Hindu neighbour gifts land to Muslim journalist

C M Siddaramaiah: ಸರಕಾರಿ ಜಾಗ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಸಂಘ-ಸಂಸ್ಥೆಗಳು ಕಾರ್ಯಕ್ರಮ, ಚಟುವಟಿಕೆಗಳನ್ನು ನಡೆಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಇದಕ್ಕೆ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್‌.ಎಸ್‌.ಎಸ್‌ಗೆ ಮಾತ್ರ ನಿರ್ಬಂಧ ಅಲ್ಲ, ಯಾವುದೇ ಸಂಘ ಸಂಸ್ಥೆಗಳು ಸರಕಾರಿ ಜಾಗ, ಸಾರ್ವಜನಿಕ ಸ್ಥಳ, ಉದ್ಯಾನಗಳಲ್ಲಿ ಕಾರ್ಯಕ್ರಮ ನಡೆಸುವಂತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ, ಸಿಎಂ ಸಿದ್ದರಾಮಯ್ಯ ನಿರ್ಬಂಧ ಕೇವಲ ಆರ್‌.ಎಸ್‌.ಎಸ್‌ಗೆ ಮಾತ್ರ ಅನ್ವಯ ಅಲ್ಲ, ಎಲ್ಲಾ ಸಂಘ-ಸಂಸ್ಥೆಗಳಿಗೂ ನಿರ್ಬಂಧ ಅನ್ವಯವಾಗುತ್ತದೆ ಎಂದು ಹೇಳಿದರು.

ಆರ್‌.ಎಸ್‌.ಎಸ್‌ ಮಾತ್ರಲವಲ್ಲ, ಯಾವುದೇ ಸಂಘ-ಸಂಸ್ಥೆಗಳು ಸರಕಾರಿ ಶಾಲೆಗಳು, ಅನುದಾನಿತ ಶಾಲೆಗಳು, ಸಾರ್ವಜನಿಕ ಸ್ಥಳಗಳು, ಉದ್ಯಾನವನ, ಸರಕಾರಿ ಕಟ್ಟಡ ಜಾಗಗಳಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಈ ಕುರಿತು ಜಗದೀಶ್‌ ಶೆಟ್ಟರ್‌ ಅವರು 2013 ರಲ್ಲಿ ಆದೇಶ ಹೊರಡಿಸಲಾಗಿತ್ತು. ಬಿಜೆಪಿ ಸರಕಾರ ಆದೇಶವನ್ನೇ ಈಗ ನಾವು ಎತ್ತಿ ಹಿಡಿದಿದ್ದೇವೆ. ಬಿಜೆಪಿ ಮಾಡಿರುವ ಆದೇಶವನ್ನು ಅವರು ವಿರೋಧ ಮಾಡಿದರೆ ಹೇಗೆ? ಎಂದು ಪ್ರಶ್ನೆ ಮಾಡಿದರು.

RELATED ARTICLES

Most Popular

Recent Comments