Home News Session: ಜೂನ್ 19ರಂದು ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ – ಸಚಿವ ಡಾ....

Session: ಜೂನ್ 19ರಂದು ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆ – ಸಚಿವ ಡಾ. ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ಸಿದ್ಧತೆ

Hindu neighbor gifts plot of land

Hindu neighbour gifts land to Muslim journalist

Session: ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಗಿರಿಧಾಮದಲ್ಲಿ ಜೂನ್ 19ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉನ್ನತ ಶಿಕ್ಷಣ ಖಾತೆ ಸಚಿವ ಡಾ. ಎಂ.ಸಿ.ಸುಧಾಕರ್ ನೇತೃತ್ವದಲ್ಲಿ ಗಿರಿಧಾಮದಲ್ಲಿ ಸಿದ್ಧತೆಗಳು ನಡೆಯುತ್ತಿವೆ ಎಂದು ವರದಿ ಹೇಳಿದೆ. ಈ ಸಭೆಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಸಮಸ್ಯೆಗಳ ಕುರಿತು ಚರ್ಚೆಯಾಗುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.

ಇದು ನಂದಿ ಗಿರಿಧಾಮದ ಸುತ್ತಮುತ್ತ ಭೌಗೋಳಿಕ ವಿಸ್ತೀರ್ಣ ಹಂಚಿಕೊಂಡಿರುವ ಬಯಲುಸೀಮೆಯ ಜಿಲ್ಲೆಗಳಿಗೆ ಬಹಳ ಉಪಯೋಗವಾಗುವ ನಿರೀಕ್ಷೆಯಿದೆ. ತ್ರಿವಳಿ ಜಿಲ್ಲೆಗಳ ಸಮಸ್ಯೆಗಳು, ಮೂಲಭೂತ ಸಮಸ್ಯೆಗಳು, ವಿಶೇಷ ಪ್ಯಾಕೇಜ್ಗಗಳನ್ನು ಘೋಷಣೆ ಮಾಡುವ ಸಾಧ್ಯತೆಯಿದೆ. ಈ ಮೂರು ಜಿಲ್ಲೆಗಳ ಶಾಸಕರು, ತಮ್ಮ-ತಮ್ಮ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಪಟ್ಟಿ ತಯಾರಿ ಮಾಡಿಕೊಂಡು ಮುಖ್ಯಮಂತ್ರಿಗಳಿಗೆ ಸಲ್ಲಿಸಲು ತಯಾರಾಗಿದ್ದಾರೆ.

ಎರಡನೇ ಸಾರ್ಕ್ ಶೃಂಗ ಸಮ್ಮೇಳನ 1986ರಲ್ಲಿ ನಂದಿ ಗಿರಿಧಾಮದಲ್ಲಿ ಆಯೋಜಿಸಲಾಗಿತ್ತು. ಆ ಸಮಯದಲ್ಲಿ ಆಗಮಿಸಿದ್ದ ಮಹಾತ್ಮ ಗಾಂಧಿಜೀ, ಜವಾಹರಲಾಲ್ ನೆಹರು ಸೇರಿದಂತೆ ವಿಶ್ವದ ಅನೇಕ ಖ್ಯಾತನಾಮರು ನಂದಿ ಗಿರಿಧಾಮದ ಪ್ರಕೃತಿ ಸೊಬಗಿಗೆ ಮನಸೋತಿದ್ದರು. ಇದೀಗ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಿರುವುದು ಸ್ಥಳೀಯರ ಸಂತಸಕ್ಕೆ ಕಾರಣವಾಗಿದೆ.