ಉತ್ತರ ಪ್ರದೇಶದ ಝಾನ್ಸಿಯಲ್ಲಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ, ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಕಿರಿಯ ಹಾಗೂ ಐದನೇ ಪುತ್ರ ಅಬಾನ್ ಅಹ್ಮದ್ ಮೃತಪಟ್ಟಿದ್ದಾರೆ. ವರದಿಯ ಪ್ರಕಾರ, ಈ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.

ಝಾನ್ಸಿಯ ಪೂಂಚ್ ಪೊಲೀಸ್ ಠಾಣಾ ವ್ಯಾಪ್ತಿಯ ಖಿಲ್ಲಿ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಅಧಿಕಾರಿಗಳು ಈವರೆಗೆ ಹೆಚ್ಚಿನ ವಿವರಗಳನ್ನು ದೃಢೀಕರಿಸಲು ನಿರಾಕರಿಸಿದ್ದಾರೆ.
ಅಬಾನ್ ಅಹ್ಮದ್ ಅವರು ಜೈಲಿನಲ್ಲಿರುವ ತಮ್ಮ ಸಹೋದರ ಅಲಿಯನ್ನು ಭೇಟಿ ಮಾಡಲು ಝಾನ್ಸಿಗೆ ತೆರಳಿದ್ದರು ಎಂದು ವರದಿಯಾಗಿದೆ. ಝಾನ್ಸಿಯಿಂದ ಪ್ರಯಾಗ್ರಾಜ್ಗೆ ಹಿಂತಿರುಗುತ್ತಿದ್ದಾಗ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಇದರಿಂದ ಮೃತಪಟ್ಟಿದ್ದಾರೆ. ಇದಕ್ಕೂ ಮುನ್ನ, ಅತೀಕ್ ಅಹ್ಮದ್ ಅವರ ಮತ್ತೊಬ್ಬ ಪುತ್ರ ಅಸದ್ ಕೂಡ ಝಾನ್ಸಿಯಲ್ಲಿ ನಡೆದ ಎನ್ಕೌಂಟರ್ನಲ್ಲಿ ಮೃತಪಟ್ಟಿದ್ದರು.
