Home National PM Fasal Bhima Yojana | PMFBY ಯೋಜನೆಯಲ್ಲಿ ಮಹತ್ವದ ಬದಲಾವಣೆ!

PM Fasal Bhima Yojana | PMFBY ಯೋಜನೆಯಲ್ಲಿ ಮಹತ್ವದ ಬದಲಾವಣೆ!

Hindu neighbor gifts plot of land

Hindu neighbour gifts land to Muslim journalist

ರೈತರ ಒಳಿತಿಗಾಗಿ ಹಲವಾರು ಯೋಜನೆಗಳನ್ನು ಕೇಂದ್ರ ಸರ್ಕಾರವು ಜಾರಿಗೊಳಿಸಿದೆ. ಅವುಗಳಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯು ರೈತರು ಸಂಕಷ್ಟದಲ್ಲಿದ್ದಾಗ ಆರ್ಥಿಕ ನೆರವು ನೀಡುವ ವಿಮಾ ಯೋಜನೆ. ಹಿಡುವಳಿದಾರರು ಸೇರಿದಂತೆ ಎಲ್ಲಾ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಇದೀಗ PMFBY ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.

ಇತ್ತೀಚಿನ ಹವಾಮಾನ ವೈಪರೀತ್ಯ ಮತ್ತು ತಂತ್ರಜ್ಞಾನದ ತ್ವರಿತ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು, ಈ ಯೋಜನೆಯಲ್ಲಿ ತ್ವರಿತವಾಗಿ ವಿಮೆ ಒದಗಿಸಲು ರೈತ ಸ್ನೇಹಿ ಬದಲಾವಣೆಗಳನ್ನು ಮಾಡಲು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಸಿದ್ಧವಾಗಿದೆ ಎಂಬ ಮಾಹಿತಿಯನ್ನು ಕೃಷಿ ಇಲಾಖೆಯ ಕಾರ್ಯದರ್ಶಿ ಮನೋಜ್ ಅಹುಜಾ ಬಹಿರಂಗಪಡಿಸಿದ್ದಾರೆ.

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿಯಲ್ಲಿ ನೈಸರ್ಗಿಕ ವಿಕೋಪಗಳು, ಕೀಟಗಳು ಮತ್ತು ರೋಗಗಳು ಅಥವಾ ಯಾವುದೇ ಬೆಳೆ ನಷ್ಟದ ಸಂದರ್ಭದಲ್ಲಿ ವಿಮಾ ರಕ್ಷಣೆಯನ್ನು ಒದಗಿಸಲಾಗುತ್ತದೆ. ಈ ಮೂಲಕ ರೈತರನ್ನು ಆರ್ಥಿಕ ಸಂಕಷ್ಟದಿಂದ ರಕ್ಷಣೆ ಮಾಡಲಾಗುತ್ತದೆ. ಈ ಯೋಜನೆಯು ರೈತರು ಸಂಕಷ್ಟದಲ್ಲಿದ್ದಾಗ ಆರ್ಥಿಕ ನೆರವು ನೀಡುವ ಯೋಜನೆ ಆಗಿದ್ದೂ ಈ ವಿಮೆ ರೈತನಿಗೆ ರಕ್ಷಣಾ ಕವಚ ಎಂದು ಹೇಳಬಹುದು.

ಹವಾಮಾನ ವೈಪರೀತ್ಯ ಬೆಳೆಯ ಇಳುವರಿ ಮೇಲೆ ನೇರ ಪರಿಣಾಮ ಬೀರುತ್ತಿದೆ. ಮಳೆಯ ಅನಿಶ್ಚಿತತೆಯಿಂದ ರೈತರ ಬೆಳೆ ಹಾನಿಗೊಳಗಾಗುತ್ತಿದೆ. ಅತಿ ಮಳೆಯಿಂದಾಗಿ ಪ್ರವಾಹ ಉಂಟಾಗಿ, ಒಂದೆಡೆ ಬೆಳೆ ಜಮೀನಿನಲ್ಲಿ ಕೊಳೆಯುತ್ತಿದ್ರೆ, ಮತ್ತೊಂದೆಡೆ ಮಳೆ ಇಲ್ಲದೇ ಬೆಳೆ ಒಣಗುತ್ತಿದೆ. ಇದರಿಂದ ದುರ್ಬಲ ವರ್ಗದ ರೈತ ಸಮುದಾಯ ಸಾಲದ ಸುಳಿಯಲ್ಲಿ ಸಿಲುಕುತ್ತಿದೆ. 2022ರಲ್ಲಿ ಮಹಾರಾಷ್ಟ್ರ, ಹರಿಯಾಣ ಮತ್ತು ಪಂಜಾಬ್‌ನಲ್ಲಿ ಅತಿಯಾದ ಮಳೆಯಿಂದಾಗಿ ರೈತರು ಸಂಕಷ್ಟದಲ್ಲಿ ಸಿಲುಕಿದ್ದರು. ಆದರೆ ಅದೇ ಸಮಯದಲ್ಲಿ ಮಧ್ಯಪ್ರದೇಶ, ಉತ್ತರ ಪ್ರದೇಶ, ಬಿಹಾರ ಮತ್ತು ಜಾರ್ಖಂಡ್‌ನಲ್ಲಿ ಮಳೆ ಕೊರತೆಯಿಂದಾಗಿ, ಭೂಮಿ ಬರುಡಾಗಿ ರೈತರು ಸಂಕಷ್ಟದಲ್ಲಿ ಸಿಲುಕಿದ್ದರು.

ಪ್ರಾಕೃತಿಕ ವಿಕೋಪದಿಂದ ರೈತರನ್ನು ರಕ್ಷಿಸಬೇಕಿದೆ. ಮುಂದಿನ ದಿನಗಳಲ್ಲಿ ಬೆಳೆ ವಿಮೆಗೆ ಅರ್ಜಿ ಸಲ್ಲಿಸುವವರ ಸಂಖ್ಯೆ ಹೆಚ್ಚಾಗಬಹುದು. ರೈತರಿಗೆ ವಿಮಾ ರಕ್ಷಣೆಯನ್ನು ಒದಗಿಸಲು ಇತರ ರೀತಿಯ ಗ್ರಾಮೀಣ ಮತ್ತು ಕೃಷಿ ವಿಮಾ ಉತ್ಪನ್ನಗಳ ಮೇಲೆ ಹೆಚ್ಚು ಗಮನಹರಿಸುವ ಅಗತ್ಯವಿದೆ ಎಂದು ಅಹುಜಾ ಹೇಳುತ್ತಾರೆ.