Home latest ಚೆಕ್ ಬೌನ್ಸ್ ಕೇಸ್‌ನಲ್ಲಿ ಶಾಸಕ ಕೆ.ವೈ.ನಂಜೇಗೌಡ ತಪ್ಪಿತಸ್ಥ : ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ

ಚೆಕ್ ಬೌನ್ಸ್ ಕೇಸ್‌ನಲ್ಲಿ ಶಾಸಕ ಕೆ.ವೈ.ನಂಜೇಗೌಡ ತಪ್ಪಿತಸ್ಥ : ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು :  ಚೆಕ್ ಬೌನ್ಸ್ ಪ್ರಕರಣದಲ್ಲಿ ಶಾಸಕ ಕೆ.ವೈ.ನಂಜೇಗೌಡ ತಪ್ಪಿತಸ್ಥ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಚೆಕ್ ಬೌನ್ಸ್ ಪ್ರಕರಣದಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಶಾಸಕ  ಕೆ.ವೈ.ನಂಜೇಗೌಡ ಅವರಿಗೆ 49.65 ಲಕ್ಷ ರೂ. ದಂಡ ವಿಧಿಸಿದೆ. ದಂಡ ಪಾವತಿಸದಿದ್ದರೆ 6 ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕು ಎಂದು 42ನೇ ಎಸಿಎಂಎಂ ಕೋರ್ಟ್ ಜಡ್ಜ್ ಜೆ.ಪ್ರೀತ್ ಆದೇಶ ಹೊರಡಿಸಿದ್ದಾರೆ.

ಕೋಲಾರ  ಜಿಲ್ಲೆಯ ಮಾಲೂರು ಕ್ಷೇತ್ರದ ಶಾಸಕ ಕೆ.ವೈ.ನಂಜೇಗೌಡ, ರಾಮಚಂದ್ರ.ಜಿ ಎಂಬುವರಿಗೆ 40 ಲಕ್ಷ ರೂ. ಸಾಲ ಮರುಪಾವತಿಗೆ ಚೆಕ್ ನೀಡಿದ್ದರು. ಆದರೆ ಚೆಕ್ ಬೌನ್ಸ್ ಆಗಿದೆ. ಈ ಸಂಬಂಧ ಕೆ.ವೈ.ನಂಜೇಗೌಡ ಅವರಿಗೆ 49.65 ಲಕ್ಷ ರೂ. ದಂಡ ವಿಧಿಸಿದ್ದು, ತಪ್ಪಿತಸ್ಥ ಎಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.