Home » ಚಿಕ್ಕಮಗಳೂರು: ಮುಸ್ಲಿಂ ಯುವತಿ ಜೊತೆ ಮಾತಾಡಿದ್ದಕ್ಕೆ ದಲಿತನ ಮೇಲೆ ಹಲ್ಲೆ

ಚಿಕ್ಕಮಗಳೂರು: ಮುಸ್ಲಿಂ ಯುವತಿ ಜೊತೆ ಮಾತಾಡಿದ್ದಕ್ಕೆ ದಲಿತನ ಮೇಲೆ ಹಲ್ಲೆ

0 comments
Physical Assault

Hindu neighbor gifts plot of land

Hindu neighbour gifts land to Muslim journalist

ಚಿಕ್ಕಮಗಳೂರು: ಮುಸ್ಲಿಂ ಯುವತಿ ಜೊತೆ ಮಾತನಾಡುತ್ತಿದ್ದ ಎನ್ನುವ ಕಾರಣಕ್ಕೆ ಜಗಳ ತೆಗೆದು, ದಲಿತ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ಮಾಡಿರುವ ಘಟನೆ ಗುರುವಾರ ಚಿಕ್ಕಮಗಳೂರಲ್ಲಿ ನಡೆದಿದೆ. ಈ ಘಟನೆ ಸಂಬಂಧ ಮೂರು ಆರೋಪಿಗಳನ್ನು ಬಂಧನ ಮಾಡಲಾಗಿದೆ.

ನಗರದ ನಿವಾಸಿಗಳಾದ ನಯಾಜ್‌, ತಬ್ರೀಜ್‌, ಹನೀಫ್‌ ಬಂಧಿತರು. ಹಲ್ಲೆ ಮಡಿದ ಉಳಿದ ಐದು ಆರೋಪಿಗಳ ಪತ್ತೆಗೆ ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆ ಪೊಲೀಸರು ಶೋಧ ನಡೆಸಿದ್ದಾರೆ.

ಪ್ರಕರಣದ ವಿವರ:
ಗುರುವಾರ ಮಧ್ಯಾಹ್ನ 2.30 ರ ಸುಮಾರಿಗೆ ಕಾಲೇಜು ಮುಗಿಸಿ ಬಂದ ಅಪ್ರಾಪ್ತ ಮುಸ್ಲಿಂ ಯುವತಿ ನಗರದ ಸಂತೆ ಮೈದಾನದಲ್ಲಿ ಪರಿಚಿತ ಅಪ್ರಾಪ್ತ ದಲಿತ ಯುವಕನ ಜೊತೆ ನಿಂತು ಮಾತನಾಡುತ್ತಿದ್ದಳು. ಇದನ್ನು ಗಮನಿಸಿದ ಎಂಟು ಯುವಕರಿದ್ದ ಮುಸ್ಲಿಂ ಯುವಕರ ಗುಂಪು ಆ ಯುವಕ ಯುವತಿಯರ ಬಳಿ ಬಂದು ಪ್ರಶ್ನಿಸಿ ಜಗಳ ತೆಗೆದಿದ್ದಾರೆ.

ಆಗ ಜೊತೆಗಿದ್ದ ಮುಸ್ಲಿಂ ಯುವತಿ ಭಯಗೊಂಡು ಅಲ್ಲಿಂದ ಹೋಗಿದ್ದಾಳೆ. ಆಗ ಅಲ್ಲಿಗೆ ಬಂದ ಯುವಕರು ದಲಿತ ಯುವಕನ ಮೇಲೆ ನೈತಿಕ ಪೊಲೀಸ್‌ ಗಿರಿ ನಡೆಸಿ ಹಲ್ಲೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಎಂಟು ಮಂದಿಯ ವಿರುದ್ಧ ದೊಂಬಿ, ಗಲಾಟೆ, ಅಟ್ರಾಸಿಟಿ ಸೆಕ್ಷನ್‌ ಅಡಿ ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

banner

ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್‌ ದಯಾಮ, ಚಿಕ್ಕಮಗಳೂರು ನಗರ ಪೊಲೀಸ್‌ ಠಾಣೆಗೆ ಆಗಮಿಸಿ ಮಾಹಿತಿ ಪಡೆದಿದ್ದು, ನಗರದಲ್ಲಿ ನೈತಿಕ ಪೊಲೀಸ್‌ ಗಿರಿ ನಡೆಸಿದರೆ ಸಹಿಸುವ ಮಾತೇ ಇಲ್ಲ. ತಲೆಮರೆಸಿಕೊಂಡವರನ್ನು ಶೀಘ್ರವೇ ಬಂಧಿಸುತ್ತೇವೆ ಎಂದು ತಿಳಿಸಿದ್ದಾರೆ.

You may also like