HomeNewsಚಿನ್ನಸ್ವಾಮಿ ಸಿಬ್ಬಂದಿಯಿಂದ ಅಭಿಮಾನಿಗಳ ಮೇಲೆ ಪೈಪ್‌ನಿಂದ ಹಲ್ಲೆ: ಕಾಲ್ತುಳಿತಕ್ಕೆ ಸಿಕ್ತು ಕಾರಣ!

ಚಿನ್ನಸ್ವಾಮಿ ಸಿಬ್ಬಂದಿಯಿಂದ ಅಭಿಮಾನಿಗಳ ಮೇಲೆ ಪೈಪ್‌ನಿಂದ ಹಲ್ಲೆ: ಕಾಲ್ತುಳಿತಕ್ಕೆ ಸಿಕ್ತು ಕಾರಣ!

Hindu neighbor gifts plot of land

Hindu neighbour gifts land to Muslim journalist

Bengaluru: ಆರ್‌ಸಿಬಿ ವಿಜಯದ ಆಚರಣೆ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನ ಬಳಿ ಸ್ಟೇಡಿಯಂ ಸಿಬ್ಬಂದಿಯಿಂದ ಅಭಿಮಾನಿಗಳ ಮೇಲೆ ಅಲ್ಲಿನ ಸಿಬ್ಬಂದಿಯಿಂದ ಪೈಪ್‌ನಿಂದ ಹಲ್ಲೆ ನಡೆದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಮಾಧ್ಯಮವೊಂದು ವರದಿಮಾಡಿದೆ. ಆ ಸಂಬಂಧಿ ವಿಶುವಲ್ ಈಗ ಲಭ್ಯ ಆಗ್ತಾ ಇವೆ.

ಈ ಭಯಾನಕ ಹಲ್ಲೆ ನಡೆದ ವೇಳೆ ಜನ ಅಲ್ಲಿಂದ ಪಾರಾಗಲು ಯತ್ನಿಸಿದ್ದು, ಆಗಲೇ ಕಾಲ್ತುಳಿತ ಸಂಭವಿಸಿದೆ. ಓರ್ವ ಆ ಸಂಬಂಧ ಬ್ಯಾರಿಕೇಡ್‌ಗೆ ಸಿಕ್ಕು ಬಿದ್ದು ನರಳುತ್ತಿರುವುದು ಸಹ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಎಲ್ಲಾ ದೃಶ್ಯಾವಳಿಗಳನ್ನು ಗಮನಿಸಿದರೆ ಸ್ಟೇಡಿಯಂ ಸಿಬ್ಬಂದಿಯ ನಿರ್ಲಕ್ಷ್ಯ ಎದ್ದು ತೋರುತ್ತಿದೆ.

ಕಾಲ್ತುಳಿತದ ಪ್ರಕರಣಕ್ಕೆ ಈಗ ನಾಲ್ವರನ್ನು ಬಂಧಿಸಿದ್ದು, ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅಲ್ಲದೆ ಕೊಹ್ಲಿ ವಿರುದ್ಧವೂ ಪ್ರಕರಣ ದಾಖಲಾಗಿದೆ. ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿ 5 ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಇನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌ ರವರು ನಿಖಿಲ್ ಸೋಸಲೆಯನ್ನು ಬಿಟ್ಟು ಕಳಿಸುವಂತೆ ಪೊಲೀಸರಿಗೆ ಒತ್ತಡ ಹಾಕಿದ್ದರು ಎನ್ನಲಾಗಿದೆ. ಇದಕ್ಕಾಗಿ ಗೋವಿಂದರಾಜ್‌ ರನ್ನು ತಮ್ಮ‌ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಕಿತ್ತು ಹಾಕಲಾಗಿದೆ ಎನ್ನಲಾಗುತ್ತಿದೆ.

RELATED ARTICLES

Most Popular

Recent Comments