ಬೆಂಗಳೂರಿನ ಮುಖ್ಯ ರಸ್ತೆಗಳ ಮೇಲೆ ವ್ಯಾಪಾರಿಗಳು ಹಾಕಿಕೊಂಡಿದ್ದ ಅಂಗಡಿಗಳನ್ನು ಬೆಂಗಳೂರು ನಗರ ಅಭಿವೃದ್ಧಿ ಸಚಿವ ಕೃಷ್ಣಭೈರೇಗೌಡ ಅವರ ಆದೇಶದ ಮೇರೆಗೆ ಅಧಿಕಾರಿಗಳು ತೆರವುಗೊಳಿಸಿದ್ದರು. ಇದರ ಬೆನ್ನಲ್ಲೇ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು.

ಸಚಿವರ ನಡೆಯಿಂದ ಕೆರಳಿರುವ ವ್ಯಾಪಾರಿಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಇದೀಗ ಈ ವ್ಯಾಪಾರಸ್ಥರ ಜೊತೆ ಸಭೆ ನಡೆಸಲು ಸಚಿವರು ತೀರ್ಮಾನಿಸಿದ್ದು 12 ಗಂಟೆಯ ಹೊತ್ತಿಗೆ ಸರಿಯಾಗಿ ಹೊತ್ತಿಗೆ ಸಭೆ ನಡೆಯಲಿದೆ.
ಸಭೆಯಲ್ಲಿ ವ್ಯಾಪಾರಿಗಳ ಸಮಸ್ಯೆಗಳನ್ನು ಸಚಿವರು ಆಲಿಸಲಿದ್ದಾರೆ ಅವರಿಗೆ ಪರ್ಯಾಯ ವ್ಯವಸ್ಥೆಯನ್ನು ಯಾವ ರೀತಿಯಲ್ಲಿ ಕಲ್ಪಿಸಿ ಕೊಡುತ್ತಾರೆ ಎಂಬುದು ಎಲ್ಲರ ಕುತೂಹಲವಾಗಿದೆ.
