ಬೆಂಗಳೂರು: ರಾಜ್ಯ ಸರಕಾರ ಗ್ಯಾರಂಟಿ ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದೆ. ಗ್ಯಾರಂಟಿ ಯೋಜನೆಗಳಿಗೆ ಮರು ಅರ್ಜಿ ಸಲ್ಲಿಸುವಂತಿಲ್ಲ ಎನ್ನುವ ಮಹತ್ವದ ಮಾಹಿತಿಯನ್ನು ರಾಜ್ಯ ಸರಕಾರ ಕೈಗೊಂಡಿದೆ.


ಸಿಎಂ ಶುಕ್ರವಾರ ಗ್ಯಾರಂಟಿ ಕಮಿಟಿ ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಗ್ಯಾರಂಟಿ ಯೋಜನೆಗೆ ಮರು ಅರ್ಜಿ ಸಲ್ಲಿಸುವಂತಿಲ್ಲ. ಹೊಸದಾಗಿ ಅರ್ಜಿ ಬದಲಾಗಿ ಮರುಪರಿಶೀಲನೆ ಮಾಡಲು ಸಭೆಯಲ್ಲಿ ಸರಕಾರ ತೀರ್ಮಾನ ಮಾಡಿದೆ.
ಫಲಾನುಭವಿಗಳ ಮರು ಪರಿಶೀಲನೆ ನಡೆಸಲು ತೀರ್ಮಾನ ಮಾಡಲಾಗಿದೆ. ಯಾರು ಮಾಡಬೇಕು, ಹೇಗೆ ಮಾಡಬೇಕು ಮರು ಪರಿಶೀಲನೆಯನ್ನು ಎನ್ನುವುದನ್ನು ಮೂರು ದಿನದೊಳಗೆ ಅಂತಿಮಪಡಿಸಿ ತಿಳಿಸಲು ಸಿಎಂ ಸೂಚನೆ ನೀಡಿದ್ದಾರೆ.
ಒಬ್ಬೇ ಒಬ್ಬ ಅರ್ಹ ಫಲಾನುಭವಿಗಳಿಗೆ ತೊಂದರೆ ಆಗಬಾರದು. ಅನರ್ಹ ಫಲಾನುಭವಿಗಳ ದುರುಪಯೋಗಕ್ಕೆ ಮಾತ್ರ ಬ್ರೇಕ್ ಹಾಕಬೇಕು ಎಂದು ಅಧಿಕಾರಿಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚಿಸಿದರು.
ಹಲವು ಫಲಾನುಭವಿಗಳು ಬ್ಯಾಂಕ್ ಸಾಲ ಪಡೆದಿರುತ್ತಾರೆ. ಸಾಲದ ಖಾತೆಗೆ ಗೃಹಲಕ್ಷ್ಮಿ ಹಣ ಹೋದ ತಕ್ಷಣ ಆ ಹಣ ಸಾಲದ ಮೊತ್ತಕ್ಕೆ ಜಮೆ ಆಗಿಬಿಡುತ್ತದೆ. ಆದ್ದರಿಂದ ಅಂತಹ ಫಲಾನುಭವಿಗಳು ಖಾತೆ ಬದಲಾಯಿಸಿರುತ್ತಾರೆ. ಇಂಥಾ ಫಲಾನುಭವಿಗಳಿಗೆ ತೊಂದರೆ ಆಗಬಾರದು ಎಂದು ತಿಳಿಸಿದರು.
ಗೃಹಲಕ್ಷ್ಮಿ ಹಣ ಹೋಗುತ್ತಿರುವುದು ಇದು ಈ ರೀತಿ ದುರುಪಯೋಗ ಆಗಬಾರದು. ಹಣ ಖಾತೆಗೆ ಜಮೆಯಾದ ತಕ್ಷಣ ಅವರ ಮೊಬೈಲಿಗೆ ವಾಯ್ಸ್ ಮೆಸೇಜ್ ಮೂಲಕ ಖಚಿತಪಡಿಸಬೇಕು ಎಂದು ಹೇಳಿದರು.

