Home News Belthangady ಯಲ್ಲಿ ಮತ್ತೆ ಶುವಾಯ್ತು ದೈವಾರಾಧನೆ ವಿವಾದ – ಕೋರ್ಟ್​ ಮೆಟ್ಟಿಲೇರಿದ ‘ಗುಳಿಗ ಕೋಲ’...

Belthangady ಯಲ್ಲಿ ಮತ್ತೆ ಶುವಾಯ್ತು ದೈವಾರಾಧನೆ ವಿವಾದ – ಕೋರ್ಟ್​ ಮೆಟ್ಟಿಲೇರಿದ ‘ಗುಳಿಗ ಕೋಲ’ ಕಟ್ಟುವ ವಿಚಾರ !!

Hindu neighbor gifts plot of land

Hindu neighbour gifts land to Muslim journalist

Belthangady : ಇಂದು ಯಾವುದೇ ರೀತಿಯ ಕೋರ್ಟ್ ಗಳು, ಪಂಚಾಯಿತಿಗಳು ಇದ್ದರೂ ಕೂಡ ಇಂದಿಗೂ ಕರಾವಳಿಯ ಜನ ಮೊದಲು ಮೊರೆಹೋಗುವುದು ದೈವಗಳ ಬಳಿ. ತಾವು ಏನನ್ನೇ ಬೇಡಿ ಹೋದರೂ, ಯಾವುದೇ ರೀತಿಯ ಅನ್ಯಾಯಕ್ಕೆ ಒಳಗಾಗಿದ್ದರೂ ದೈವಗಳು ನಮಗೆ ನ್ಯಾಯ ಒದಗಿಸುತ್ತವೆ ಎಂಬುದು ಅವರೆಲ್ಲರ ನಂಬಿಕೆ. ಅದು ಸತ್ಯ ಕೂಡ. ಆದರಿಗ ಅಚ್ಚರಿ ಎಂಬಂತೆ ಬೆಳ್ತಂಗಡಿಯ ದೈವರಾದನೆ ವಿಚಾರವೊಂದು ವಿವಾದಕ್ಕೀಡಾಗಿದ್ದು ಕೋರ್ಟ್ ಮೆಟ್ಟಿಲೇರಿದೆ.

ಹೌದು, ಈ ವರ್ಷದ ಆರಂಭದಲ್ಲಿ ಅಂದರೆ 2024ರ ಜನವರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ(Belthangady ) ಯಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿದ್ದ ಅನ್ಯ (ಮೊಗೇರ) ಸಮಾಜದ ಯುವಕನಿಂದ ಗುಳಿಗ ದೈವಕ್ಕೆ(daivaradhane) ನರ್ತನ ಸೇವೆ ವಿಚಾರ ಸದ್ಯ ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ಅಲ್ಲದೆ ಈ ವಿಚಾರ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಮೆಟ್ಟಿಲೇರಿದೆ.

ಅಂದಹಾಗೆ ಈ ಬಾರಿ ಕೂಡ ಅದೇ ಜಾಗದಲ್ಲಿ ಗುಳಿಗ ದೈವದ ಕೋಲ ನಡೆಯಲಿದ್ದು ಆ ಕೋಲದಲ್ಲಿ ಮೊಗೇರ ಸಮುದಾಯದ ಯುವಕ ಮತ್ತೆ ದೈವ ನರ್ತನ ನಡೆಸಲಿದ್ದಾರೆ. ಹೀಗಾಗಿ ಮತ್ತೆ ನಲಿಕೆ ಸಮುದಾಯದಿಂದ ಗುಳಿಗ ಕೋಲ ತಡೆಯುವ ಸಾಧ್ಯತೆ ಇದೆ. ಈ ಕಾರಣಕ್ಕೆ ಉದ್ಭವ ಶ್ರೀ ಆದಿಲಿಂಗೇಶ್ವರ ಸೇವಾ ಟ್ರಸ್ಟ್ ಬೆಳ್ತಂಗಡಿ ಕೋರ್ಟ್ ಮೆಟ್ಟಿಲೇರಿದೆ. ನಲಿಕೆ ಸಮಾಜದಿಂದ ಗುಳಿಗ ಕೋಲಕ್ಕೆ ತಡೆಯಾಗದಂತೆ ಟ್ರಸ್ಟ್ ಕೋರ್ಟ್ ಮೆಟ್ಟಿಲೇರಿದ್ದು, ಬೆಳ್ತಂಗಡಿಯ ನಲಿಕೆ ಸಮಾಜ ಸೇವಾ ಸಂಘದ ವಿರುದ್ದ ಕೋರ್ಟ್​ನಲ್ಲಿ ಖಾಸಗಿ ದೂರು ನೀಡಲಾಗಿದೆ.

ಇನ್ನು ದೂರು ಸ್ವೀಕರಿಸಿದ ನ್ಯಾಯಾಲಯದಿಂದ ನಲಿಕೆ ಸಮಾಜ ಸೇವಾ ಸಂಘಕ್ಕೆ ಸಮನ್ಸ್ ಜಾರಿ ಮಾಡಲಾಗಿದೆ. ಅಲ್ಲದೆ ಬೆಳ್ತಂಗಡಿ ಕೋರ್ಟ್​ಗೆ ಹಾಜರಾಗುವಂತೆ ನಲಿಕೆ ಸಮಾಜ ಸೇವಾ ಸಂಘ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಪ್ರಭಾಕರ್ ಎಂಬವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಏನಿದು ಪ್ರಕರಣ?
ದೈವಾರಾಧನೆ ಕಟ್ಟುಪಾಡಿನ ಪ್ರಕಾರ ಮೂರು ಸಮಾಜದವರಿಂದ ಮಾತ್ರ ದೈವ ನರ್ತನ ಸೇವೆ ಮಾಡಬೇಕು. ಪರವ, ಪಂಬದ, ನಲಿಕೆ ಸಮಾಜದಿಂದ ಮಾತ್ರ ದೈವ ನರ್ತನ ಸೇವೆ ಅನ್ನೋ ಕಟ್ಟುಪಾಡಿದೆ. ಆದರೆ ಕಳೆದ ಜನವರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಅನ್ಯ (ಮೊಗೇರ) ಸಮಾಜದ ಯುವಕನಿಂದ ಗುಳಿಗ ದೈವಕ್ಕೆ ನರ್ತನ ಸೇವೆ ಮಾಡಲಾಗಿದೆ. ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಯುವಕ ಕೋಲ ಕಟ್ಟಿದ್ದ. ಈ ವೇಳೆ ದೈವ ನರ್ತಕ ನಲಿಕೆ ಸಮಾಜ ಕೋಲ ತಡೆದು ಆಕ್ರೋಶ ಹೊರ ಹಾಕಿತ್ತು. ಭಾರೀ ವಿವಾದದ ಬೆನ್ನಲ್ಲೇ ಗುಳಿಗ ದೈವ ಹಾಗೂ ನಲಿಕೆ ಸಮಾಜಕ್ಕೆ ಯುವಕ ಕ್ಷಮೆ ಯಾಚಿಸಿದ್ದ. ಅದರೀಗ ಕೋಲ ಹತ್ತಿರ ಬರುತ್ತಿದ್ದಂತೆ ಈ ವಿಚಾರ ಮತ್ತೆ ಮುನ್ನಲೆಗೆ ಬಂದು ಕೋರ್ಟ್ ತನಕ ಹೋಗಿದೆ.. ಸದ್ಯ ಕೋರ್ಟ್ ತೀರ್ಮಾನದ ಮೇಲೆ ದೈವರಾಧಕರ ಚಿತ್ತ ನೆಟ್ಟಿದೆ.