Home » ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಘಟಿಕೋತ್ಸವ

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಘಟಿಕೋತ್ಸವ

0 comments

ಶ್ರಮಕ್ಕೆ ತಕ್ಕ ಫಲ ದೊರಕುತ್ತದೆ. ಹಾಗಾಗಿ ವಿದ್ಯಾರ್ಥಿಗಳು ನಿರಂತರ ಪ್ರಯತ್ನಶೀಲರಾಗಬೇಕು. ಖಂಡಿತ ತಮ್ಮ – ತಮ್ಮ ಗುರಿ ತಲುಪಲು ಸಾಧ್ಯ ಎಂದು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಹೇಳಿದರು.
ಅವರು
ಗುರುವಾಯನಕೆರೆ ವಿದ್ಯಾ ಸಾಗರ ಕ್ಯಾಂಪಸ್ ನ ಎಕ್ಸೆಲ್ ಟೆಕ್ನೋ ಶಾಲೆಯಲ್ಲಿ ಕಿಂಡರ್‌ಗಾರ್ಟನ್‌ (K.G) ಮಕ್ಕಳ ಘಟಿಕೋತ್ಸವ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ, ಮಾತನಾಡಿದರು. ಕಲಿಕೆ ಹೊರೆಯಾಗದೆ, ಸಂತೋಷದಿಂದ ಅಭ್ಯಾಸ ಮಾಡುವಂಥ ವಾತಾವರಣ ಶಾಲೆಗಳಲ್ಲಿ ಇರಬೇಕು. ಹಾಗಾಗಿ ನಮ್ಮ ಶಾಲೆಯಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳನ್ನು ಕೂಡಾ ನಿರಂತರವಾಗಿ ಹಮ್ಮಿ ಕೊಳ್ಳುತ್ತಾ ಬಂದಿದ್ದೇವೆ ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ಎಕ್ಸೆಲ್ ಸಂಸ್ಥೆಯ ಆಡಳಿತಾಧಿಕಾರಿಯಾದ ಶ್ರೀ ಕೀರ್ತಿ ನಿಧಿ ಜೈನ್ ಪಾಲ್ಗೊಂಡರು. ಶಾಲಾ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಸಹನಾ ಜೈನ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಸಂಯೋಜಕಿ ಶ್ರೀಮತಿ ಲೀನಾ ಫ್ಲೋರಿನ್ ಪಿಂಟೋ ಕಾರ್ಯಕ್ರಮವನ್ನು ನಿರೂಪಿಸಿ ಸಹ ಶಿಕ್ಷಕಿಯಾದ ಶ್ರೀಮತಿ ಸ್ವಾತಿಯವರು ಅತಿಥಿಗಳನ್ನು ಸ್ವಾಗತಿಸಿ ಶ್ರೀಮತಿ ಪವಿತ್ರ ಕೋಟ್ಯಾನ್ ರವರು ವಂದಿಸಿದರು.

ಸಮಾರಂಭದಲ್ಲಿ ವಿದ್ಯಾರ್ಥಿಗಳ ಹೆಸರನ್ನು ಶಿಕ್ಷಕಿ ಗೀತಾ ಓದಿ, ಮಕ್ಕಳನ್ನು ವೇದಿಕೆಗೆ ಆಹ್ವಾನಿಸಿದರು. ಶಿಕ್ಷಕಿ ಚೇತನಾ ಸಹಕರಿಸಿದರು.

ವಿದ್ಯಾರ್ಥಿಗಳು ವೇದಿಕೆಗೆ ಬಂದು ಅಧ್ಯಕ್ಷರಿಂದ ತಮ್ಮ ಪ್ರಮಾಣಪತ್ರಗಳನ್ನು ಸ್ವೀಕರಿಸಿದರು. ಎಕ್ಸೆಲ್ ಸಂಸ್ಥೆಯ ಅಧ್ಯಕ್ಷರು ಎಲ್ಲಾ ಕೆ ಜಿ ವಿದ್ಯಾರ್ಥಿಗಳಿಗೆ ಕಂಚಿನ ದೀಪವನ್ನು ನೀಡಿ ಶುಭ ಹಾರೈಸಿದರು. ಕೊನೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

You may also like