Home » ಮನೆ ಬಿಟ್ಟು ಓಡಿಹೋಗಿ ಮದುವೆಯಾದ ಜೋಡಿ – ಅರ್ಚಕನನ್ನು ಕಿಡ್ನಾಪ್ ಮಾಡಿ ಥಳಿಸಿದ ಯುವತಿಯ ಮನೆಯವರು !!

ಮನೆ ಬಿಟ್ಟು ಓಡಿಹೋಗಿ ಮದುವೆಯಾದ ಜೋಡಿ – ಅರ್ಚಕನನ್ನು ಕಿಡ್ನಾಪ್ ಮಾಡಿ ಥಳಿಸಿದ ಯುವತಿಯ ಮನೆಯವರು !!

0 comments

ಪ್ರೀತಿಯ ಬಲೆಯಲ್ಲಿ ಬಿದ್ದ ಯುವಕ ಯುವತಿಯರು ಮನೆಯಲ್ಲಿ ಒಪ್ಪುವುದಿಲ್ಲವೆಂದು ಮನೆ ಬಿಟ್ಟು ಓಡಿ ಹೋಗಿ ಮದುವೆಯಾಗಿದ್ದಾರೆ. ಆದರೆ ಇದರಿಂದ ರೊಚ್ಚಿಗೆದ್ದ ಯುವತಿಯ ತಂದೆ ಅರ್ಚಕನಾದ ಯುವಕನ ಅಣ್ಣನನ್ನು ಕಿಡ್ನಾಪ್ ಮಾಡಿ ಥಳಿಸಿರುವ ಘಟನೆ ನಡೆದಿದೆ.

ಬ್ಯಾಡರಹಳ್ಳಿ ಮೂಲದ ಶಿವಕುಮಾರ್ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಇವರ ಪ್ರೀತಿಗೆ ಮನೆಯವರ ವಿರೋಧವಿತ್ತು. ಯುವತಿ ಮನೆಯವರು ಮದುವೆಗೆ ಒಪ್ಪಿರಲಿಲ್ಲ. ಸೋ.. ಪ್ರೇಮಿಗಳಿಬ್ಬರೂ ಮನೆ ಬಿಟ್ಟು ಓಡಿಹೋಗಿದ್ದಾರೆ. ಇದರಿಂದ ಸಿಟ್ಟಿಗೆದ್ದ ಯುವತಿಯ ತಂದೆ ಬಸವರಾಜ್ ಮತ್ತು ಆತನ ಸಂಬಂಧಿಕರು, ಶಿವಕುಮಾರ್‌ ನ ಅಣ್ಣ ಮದುವೆ ಮಾಡಿಸಿದ ಅರ್ಚಕನಾಗಿದ್ದ ಕೊಟ್ರೇಶ್ ಅವರನ್ನು ಕಿಡ್ನ್ಯಾಪ್ ಮಾಡಿ ಕೂಡಿ ಹಾಕಿ ಮೈಕೈ ಮುರಿಯುವಂತೆ ಹಲ್ಲೆ ನಡೆಸಿದ್ದಾರೆ.

ಬ್ಯಾಡರಹಳ್ಳಿಯ ದೇವಾಲಯವೊಂದರಲ್ಲಿ ಅರ್ಚಕರಾಗಿರುವ ಕೊಟ್ರೇಶ್ ಅವರನ್ನು ಪೊಲೀಸ್ ಸ್ಟೇಷನ್‌ಗೆ ಹೋಗೋಣ ಬಾ ಎಂದು ನಂಬಿಸಿ ಕಾರಿನಲ್ಲಿ ಕರೆದೊಯ್ದಿದ್ದಾರೆ. ಆದರೆ ಸ್ಟೇಷನ್‌ಗೆ ಹೋಗುವ ಬದಲಾಗಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದು ಕೂಡಿ ಹಾಕಿದ್ದಾರೆ. ಬಳಿಕ 

ಕೊಟ್ರೇಶ್ ಅವರ ಕೈಕಾಲುಗಳನ್ನು ಕಟ್ಟಿ ಹಾಕಿ ಕೂಡಿ ಹಾಕಿ ಮನ ಬಂದಂತೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ಮಾಡುವ ದೃಶ್ಯವನ್ನು ಚಿತ್ರೀಕರಿಸಿ ತಮ್ಮನಿಗೆ ಎಲ್ಲಿದ್ದರೂ ವಾಪಸ್ ಬರುವಂತೆ ಹೇಳಿಸಿದ್ದಾರೆ.

banner

“ಶಿವು, ನೀನು ಎಲ್ಲಿದ್ದರೂ ಹುಡುಗಿಯನ್ನು ತಂದು ಒಪ್ಪಿಸು” ಎಂದು ಹೇಳಿಸಿ ವಿಡಿಯೋ ರೆಕಾರ್ಡ್ ಮಾಡಿದ್ದಾರೆ. ಪ್ರಾಣಭಯದಲ್ಲಿದ್ದ ಕೊಟ್ರೇಶ್ ತಮ್ಮನ ಬಳಿ ಅಂಗಲಾಚುವ ವಿಡಿಯೋವನ್ನು ಆರೋಪಿಗಳು ಅವರ ಸಂಬಂಧಿಕರಿಗೆ ಕಳುಹಿಸಿ ಬೆದರಿಕೆ ಹಾಕಿದ್ದಾರೆ. ಬಳಿಕ ಇದನ್ನು ಕಂಡ ಕೊಟ್ರೇಶ್ ಮನೆಯವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ನಂತರ ಗಂಭೀರವಾಗಿ ಹಲ್ಲೆಗೊಳಗಾಗಿರುವ ಕೊಟ್ರೇಶ್ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬ್ಯಾಡರಹಳ್ಳಿ ಪೊಲೀಸರಿಂದ ತನಿಖೆ ಮುಂದುವರೆಸಿದ್ದಾರೆ.

You may also like