Home » ಡಿಕೆಶಿ ಭೇಟಿಯಾದ ಕಾಡುಗಳ್ಳ ವೀರಪ್ಪನ್‌ ಪುತ್ರಿ

ಡಿಕೆಶಿ ಭೇಟಿಯಾದ ಕಾಡುಗಳ್ಳ ವೀರಪ್ಪನ್‌ ಪುತ್ರಿ

0 comments
D k Shivkumar

ರಾಮನಗರ: ಕಾಡುಗಳ್ಳ ವೀರಪ್ಪನ್‌ ಪುತ್ರಿ ವಿದ್ಯಾರಾಣಿ ಶುಕ್ರವಾರ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಬಿಡದಿ ಸಮೀಪದ ವಂಡರ್‌ ಲಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರುವ ಒಡಿಶಾ ರಾಜ್ಯದ ಕಾಂಗ್ರೆಸ್‌ ಶಾಸಕರನ್ನು ಭೇಟಿ ಮಾಡಲು ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿ ಮಾಡಿದ್ದಾರೆ. ಹಾಗೂ ದೇವರ ಫೋಟೋ ನೀಡಿ ಆಶೀರ್ವಾದ ಪಡೆದಿದ್ದಾರೆ.

2020ರಲ್ಲಿ ತಮಿಳುನಾಡು ರಾಜಕಾರಣಕ್ಕೆ ಪ್ರವೇಶಿಸಿದ ವಿದ್ಯಾರಾಣಿ ಬಿಜೆಪಿ ಯುವ ಘಟಕದ ಉಪಾಧ್ಯಕ್ಷಾಗಿ ನೇಮಕಗೊಂಡಿದ್ದ ಇವರು, ನಂತರ ಇವರು ಬಿಜೆಪಿ ತೊರೆದು, ನಾಮ್‌ ತಮಿಲರ್‌ ಕಚ್ಚಿ (ಎನ್‌ಟಿಕೆ) ಪಕ್ಷ ಸೇರ್ಪಡೆಯಾಗಿದ್ದಾರೆ. ಈಗ ಡಿಕೆಶಿ ತಮ್ಮನ್ನು ಭೇಟಿಯಾದ ವಿದ್ಯಾರಾಣಿ ಅವರ ಜೊತೆ ಮಾತುಕತೆ ಮಾಡಲು ಪ್ರತ್ಯೇಕವಾಗಿ ಅವಕಾಶ ನೀಡುವುದಾಗಿ ಹೇಳಿ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

You may also like