HomeNewsಮಗಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ

ಮಗಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ

Hindu neighbor gifts plot of land

Hindu neighbour gifts land to Muslim journalist

ಮೈಸೂರು : ತಾಯಿ ತನ್ನ ಮಗುವಿನ ಜತೆ ಮಂಡ್ಯದ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ಕಾವೇರಿನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೈಸೂರಿನ ಹೂಟಗಳ್ಳಿ ನಿವಾಸಿ ಪ್ರದೀಪ್‌ಕುಮಾರ್ ಪತ್ನಿ ಭಾರ್ಗವಿ(31) ಹಾಗೂ ಮಗಳು ದೀಕ್ಷಾ(3) ಆತ್ಮಹತ್ಯೆ ಮಾಡಿಕೊಂಡವರು.

ಶುಕ್ರವಾರ ಸಂಜೆ ಭಾರ್ಗವಿ ಮಗುವಿನೊಂದಿಗೆ ನದಿಗೆ ಹಾರಿದ್ದು, ಶನಿವಾರ ಬೆಳಗ್ಗೆ ಮೃತದೇಹಗಳು ಪತ್ತೆಯಾಗಿವೆ.

ಶ್ರೀರಂಗಪಟ್ಟಣ ತಾಲೂಕು ದೇವೇಗೌಡನಕೊಪ್ಪಲು ಗ್ರಾಮದ ಭಾರ್ಗವಿ ಅವರನ್ನು ಪಾಂಡವಪುರ ತಾಲೂಕು ಲಕ್ಷ್ಮೀಸಾಗರ ಗ್ರಾಮದ ಪ್ರದೀಪ್‌ಕುಮಾರ್‌ಗೆ 5 ವರ್ಷದ ಹಿಂದೆ ಮದುವೆ ಮಾಡಲಾಗಿತ್ತು. ಇವರ ಕುಟುಂಬ ಮೈಸೂರಿನ ಹೂಟಗಳ್ಳಿಯಲ್ಲಿ ವಾಸವಾಗಿತ್ತು.

ಘಟನೆ ಕುರಿತು ಶ್ರೀರಂಗಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Praveen Chennavara
Praveen Chennavara Palthady village & post Kadaba Taluq D.K.-For contact- 7090806456
RELATED ARTICLES

Most Popular

Recent Comments