ದಾವಣಗೆರೆ: ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ವಿರುದ್ಧ ತೊಡೆತಟ್ಟಿ ಕಣಕ್ಕಿಳಿದಿರುವ ಸಾದಿಕ್ ಪೈಲ್ವಾನ್ ನಾಮಪತ್ರ ತಿರಸ್ಕೃತಗೊಂಡಿದೆ. ರಾಷ್ಟ್ರೀಯ ಪಕ್ಷಗಳ ಹೆಸರಿನಲ್ಲಿ ನಾಮಪತ್ರವನ್ನು ಸಲ್ಲಿಸಿ ಬಿ ಫಾರಂ ಒದಗಿಸದ್ದಕ್ಕಾಗಿ ನಾಮಪತ್ರ ತಿರಸ್ಕೃತವಾಗಿದೆ. ಆದರೆ, ಪಕ್ಷೇತ್ರ ಅಭ್ಯರ್ಥಿ ಸಲ್ಲಿಸಿದ ಪೈಲ್ವಾನ್ ನಾಮಪತ್ರ ಊರ್ಜಿತವಾಗಿದೆ. ಈ ಕ್ಷೇತ್ರದಲ್ಲಿ ಒಟ್ಟು 45 ನಾಮಪತ್ರ ಸಲ್ಲಿಕೆ ಆಗಿತ್ತು. ಈ ಪೈಕಿ ಮೂವರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತವಾಗಿದೆ. 42 ನಾಮಪತ್ರಗಳು ಮಾತ್ರ ಮಾನ್ಯವಾಗಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಮತದಾರರೇ ನಿರ್ಣಾಯಕ. ಇಲ್ಲಿ 64,246 ಮುಸ್ಲಿಂ ಸಮುದಾಯದ ಮತದಾರರಿದ್ದಾರೆ. ಆದರೆ ಹೈಕಮಾಂಡ್ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿ ಮಾಡಿದೆ. ಸಮರ್ಥ್ ಜೊತೆಗೆ 36 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು ಅಭ್ಯರ್ಥಿಗಳಲ್ಲಿ 23 ಮಂದಿ ಮುಸ್ಲಿಂ ಸಮುದಾಯದವರೇ ಇದ್ದಾರೆ. ಕಾಂಗ್ರೆಸ್ಗೆ ಇದು ನುಂಗಲಾರದ ಬಿಸಿತುಪ್ಪವಾಗಿದೆ.
ನಾಮಪತ್ರ ವಾಪಸ್ ಪಡೆಯುವುದಕ್ಕೆ ಮಾರ್ಚ್ 26 ಕೊನೆಯ ದಿನ. ಇನ್ನು 22 ಅಭ್ಯರ್ಥಿಗಳು ನಾಮಿನೇಷನ್ ವಾಪಸ್ ಪಡೆದು ಕಾಂಗ್ರೆಸ್ ಬಂಡಾಯ ಅಭ್ಯರ್ಥಿ, ಸಾದಿಕ್ ಪೈಲ್ವಾನ್ಗೆ ಬೆಂಬಲ ಕೊಡುವ ಸಾಧ್ಯತೆ ಇದೆ. ಕಾಂಗ್ರೆಸ್ಸಿಗೆ ಈ ಮೂಲಕ ಬಿಸಿ ಮುಟ್ಟಿಸಲು ರೆಡಿಯಾಗಿದೆ ಎನ್ನಬಹುದು.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಂಡಾಯದ ಕುರಿತು ಡಿಸಿಎಂ ಡಿಕೆಶಿ ಪ್ರತಿಕ್ರಿಯೆ ನೀಡಿದ್ದು, ನಾಮಪತ್ರ ಹಾಕಿದವರೆಲ್ಲ ನಮ್ಮವರೇ, ಎಲ್ಲವೂ ಸರಿಹೋಗಲಿದೆ ಎಂದು ಹೇಳಿದ್ದಾರೆ.

