Home » Vittla: ವಿಟ್ಲ : ಗುಡ್ಡ ಪ್ರದೇಶದಲ್ಲಿ ಕೊಳೆತ ಮೃತದೇಹ ಪತ್ತೆ!

Vittla: ವಿಟ್ಲ : ಗುಡ್ಡ ಪ್ರದೇಶದಲ್ಲಿ ಕೊಳೆತ ಮೃತದೇಹ ಪತ್ತೆ!

0 comments

Vittla : ಜನ ಸಂಚಾರ ಇಲ್ಲದ ಗುಡ್ಡ ಪ್ರದೇಶದಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ವಿಟ್ಲ (vittla )ಸಾಲೆತ್ತೂರು ಗ್ರಾಮದಲ್ಲಿ ನಡೆದಿದೆ.

ಪಾಲ್ತಾಜೆ ನಿವಾಸಿ ನಾರಾಯಣ ಪೂಜಾರಿ ಮೃತ ವ್ಯಕ್ತಿ ಎಂದು ಗುರುತಿಸಲಾಗಾಗಿದೆ. ಸ್ಥಳೀಯ ನಿವಾಸಿಯೊಬ್ಬರು ಮಧ್ಯಾಹ್ನ ವೇಳೆ ಗುಡ್ಡಕ್ಕೆ ಕಟ್ಟಿಗೆ ತರಲು ಹೋದಾಗ ಪೊದೆಗಳ ಎಡೆಯಲ್ಲಿ ಬಿದ್ದುಕೊಂಡಿರುವ ಸ್ಥಿತಿಯಲ್ಲಿ ಮೃತದೇಹ ಕಂಡುಬಂದಿದೆ.

ವಿಟ್ಲ ಪೊಲೀಸರು ತಕ್ಷಣವೇ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದಾಗ ಮೃತ ವ್ಯಕ್ತಿ ಪಾಲ್ತಾಜೆ ನಿವಾಸಿ ನಾರಾಯಣ ಪೂಜಾರಿ ಎಂಬುದು ತಿಳಿದುಬಂದಿದೆ. ಮೃತರ ಪತ್ನಿ ಮತ್ತು ಮಕ್ಕಳು ಕೆಲ ವರ್ಷಗಳ ಹಿಂದೆ ನಾರಾಯಣ ಪೂಜಾರಿ ಜೊತೆ ಮನಸ್ತಾಪ ಬಂದು ಪೆರುವಾಯಿ ಸಮೀಪ ವಾಸವಾಗಿದ್ದಾರೆ. ಕೆಲ ಸಮಯಗಳಿಂದ ಒಬ್ಬಂಟಿಯಾಗಿ ನಿರ್ಜನ ಪ್ರದೇಶದ ಪಾಲ್ತಾಜೆ ಗುಡ್ಡದಲ್ಲಿ ಮಲಗುತ್ತಿದ್ದ ನಾರಾಯಣ ಪೂಜಾರಿ ಮೂರು ದಿನಗಳ ಹಿಂದೆ ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ.

ಈ ಬಗ್ಗೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

banner

You may also like