Homelatestಡ್ರಗ್ಸ್ ಸೇವಿಸಿ ನಶೆಯಲ್ಲಿ ಶ್ರದ್ಧಾ ಹತ್ಯೆ | 35 ಪೀಸ್ ಅಲ್ಲ 16 ಪೀಸ್ -...

ಡ್ರಗ್ಸ್ ಸೇವಿಸಿ ನಶೆಯಲ್ಲಿ ಶ್ರದ್ಧಾ ಹತ್ಯೆ | 35 ಪೀಸ್ ಅಲ್ಲ 16 ಪೀಸ್ – ಅಫ್ತಾಬ್ ತಪ್ಪೊಪ್ಪಿಗೆ

Hindu neighbor gifts plot of land

Hindu neighbour gifts land to Muslim journalist

ದೆಹಲಿಯ ಶ್ರದ್ದಾ ಕೊಲೆ ಪ್ರಕರಣದ ಬಗ್ಗೆ ಆರೋಪಿ ಬಂಧನದ ಬಳಿಕ ಸತ್ಯ ಒಂದೊಂದಾಗೆ ಬಯಲಾಗುತ್ತಿದ್ದು, ತಾನೊಬ್ಬ ಡ್ರಗ್ ಅಡಿಕ್ಟ್ ಎಂಬ ಸತ್ಯವನ್ನು ಆರೋಪಿ ಬಾಯಿಬಿಟ್ಟಿದ್ದಾನೆ . ಹೌದು, ನಾನು ಡ್ರಗ್ಸ್ ಸೇವಿಸುತ್ತಿದ್ದೆ, ನಶೆಯಲ್ಲೇ ಶ್ರದ್ಧಾ ಹತ್ಯೆ ಮಾಡಿದೆ ಎಂದು ಅಫ್ತಾಬ್ ತಾನು ಎಸೆದ ಭೀಕರ ಕೃತ್ಯದ ಕರಾಳ ಸತ್ಯವನ್ನು ಹೊರ ಕಕ್ಕಿದ್ದಾನೆ.

ನವದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣ ಘಟಾನುಘಟಿ ಪೊಲೀಸರನ್ನು ಜೊತೆಗೆ ಹೀನಾತಿ ಹೀನ ಕೃತ್ಯ ಬೇಧಿಸಿದ ಖಾಕಿ ಪಡೆಗೂ ನಡುಕ ಹುಟ್ಟಿಸಿದೆ. ಈ ಪ್ರಕರಣದ ಕುರಿತಾಗಿ, ಪ್ರತಿನಿತ್ಯ ಸ್ಫೋಟಕ ಮಾಹಿತಿಗಳು ಹೊರ ಬೀಳುತ್ತಿದೆ.

ದೆಹಲಿಯ ಶ್ರದ್ದಾ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರ ಮುಂದೆ ಅಫ್ತಾಬ್ ರೋಚಕ ಸತ್ಯಗಳನ್ನು ಒಂದೊಂದಾಗಿ ಬಾಯಿ ಬಿಡುತ್ತಿದ್ದು, ಅಫ್ತಾಬ್ ಡ್ರಗ್ಸ್‌ ಅಡಿಕ್ಟ್ ಆಗಿರುವುದಾಗಿ ಒಪ್ಪಿಕೊಂಡಿದ್ದಾನೆ. ನಿತ್ಯ ಗಾಂಜಾ ಸೇವಿಸುತ್ತಾ, ಅದೇ ನಶೆಯಲ್ಲಿ ತೇಲಾಡುತ್ತಿದ್ದುದ್ದನ್ನು ಗಮನಿಸಿ, ಗಾಂಜಾ ಸೇವನೆಯನ್ನು ಶ್ರದ್ಧಾ ವಿರೋಧಿಸಿ ಈ ಕಾರಣಕ್ಕೆ ಶ್ರದ್ಧಾ ಜಗಳವಾಡುತ್ತಿದ್ದಳು ಎಂದು ತನಿಖೆ ವೇಳೆ ಅಫ್ತಾಬ್ ಹೇಳಿಕೊಂಡಿದ್ದಾನೆ.

ಮುಂಬೈನಿಂದ ದೆಹಲಿಗೆ ಶಿಫ್ಟ್ ಆಗಿದ್ದರಿಂದ ಶ್ರದ್ಧಾ ಮತ್ತು ನನ್ನ ನಡುವೆ ಲಗೇಜ್ ತರುವ ವಿಚಾರಕ್ಕೆ ಮೇ 18 ರಂದು ಜಗಳವಾಗಿತ್ತು. ಮುಂಬೈನಲ್ಲಿ ಮನೆ ಬಳಕೆಯ ಲಗೇಜ್ ಇದ್ದುದನ್ನು, ದೆಹಲಿಗೆ ತರುವ ಬಗ್ಗೆ ಇಬ್ಬರ ನಡುವೆ ಜಗಳವಾಗಿದ್ದಲ್ಲದೆ, ಇಬ್ಬರು ಕೂಡ ಹಣದ ಕೊರತೆ ಎದುರಿಸುತ್ತಿದ್ದರಿಂದ ಮುಂಬೈನಿಂದ ಲಗೇಜ್ ತರುವುದು ಯಾರು ಎಂದು ಜಗಳಮಾಡಿಕೊಂಡಿದ್ದು, ಕೊಲೆಯಾದ ದಿನ ತೀವ್ರ ಮಾತಿನ ಜಕಮಕಿ ನಡೆದಿತ್ತು ಎಂದಿದ್ದಾನೆ.

ಜಗಳ ಮಾಡಿಕೊಳ್ಳುತ್ತಿದ್ದ ನಡುವೆಯೂ ಮನೆಯಿಂದ ಹೊರಗೆ ಹೋಗಿ ಗಾಂಜಾ ಸೇವಿಸಿ ಮನೆಗೆ ವಾಪಸ್ ಆಗಿದ್ದು, ಈ ವೇಳೆ ಜಗಳ ಮುಂದುವರಿದು ನಶೆಯಲ್ಲಿ ಕತ್ತು ಹಿಸುಕಿ ಹತ್ಯೆ ಮಾಡಿರುವುದಾಗಿ ಅಫ್ತಾಬ್ ಹೇಳಿಕೆ ನೀಡಿದ್ದಾನೆ. ಇದು ನಶೆಯಲ್ಲಿ ನಡೆದ ಘಟನೆಯಾಗಿದ್ದು, ಶ್ರದ್ಧಾ ಹತ್ಯೆ ಮಾಡುವ ಉದ್ದೇಶವಿರಲಿಲ್ಲ ಎಂದು ಎಸಗಿದ ಕೃತ್ಯಕ್ಕೆ ಸೈಕೋ ಕಿಲ್ಲರ್ ಅಫ್ತಾಬ್ ಹೇಳಿಕೆ ನೀಡಿದ್ದಾನೆ.


ಈ ನಡುವೆ ಶ್ರದ್ಧಾ ಸೋಶಿಯಲ್ ಮೀಡಿಯಾ ಪರಿಶೀಲನೆ ನಡೆಸಿರುವ ಪೊಲೀಸರಿಗೆ ಹೊಸ ಮಾಹಿತಿ ತಿಳಿದು ಬಂದಿದ್ದು, ಶ್ರದ್ಧಾ ಅಪ್ಲೋಡ್ ಮಾಡಿದ ಹಳೆಯ ಫೋಟೋದಲ್ಲಿ ಮುಖದ ಮೇಲೆ ಗಾಯ ಪತ್ತೆಯಾಗಿದೆ. ಮುಖದ ಮೇಲೆ ಗಾಯ, ಊದಿಕೊಂಡ ಕಣ್ಣುಗಳು, ಮೂಗಿನ ಮೇಲೆಯೂ ಗಾಯದ ಗುರುತು ಹೊಂದಿರುವ ಫೋಟೋಗಳನ್ನು 2020ರಲ್ಲಿ ಶ್ರದ್ಧಾ ಅಪ್ಲೋಡ್ ಮಾಡಿದ್ದಾಳೆ. ಹೀಗಾಗಿ ಅಫ್ತಾಬ್ ಈ ಹಿಂದೆಯೂ ಶ್ರದ್ಧಾ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದಾನೆಯೆ ಎಂಬ ಅನುಮಾನ ದಟ್ಟವಾಗಿ ಕಾಡುತ್ತಿದೆ.


ವಿಚಾರಣೆ ವೇಳೆ ಶ್ರದ್ಧಾ ಕೂಡಾ ಮದ್ಯ ಸೇವನೆ ಮಾಡುತ್ತಿದ್ದ ಮಾಹಿತಿಯನ್ನು ಅಫ್ತಾಬ್ ಹಂಚಿಕೊಂಡಿದ್ದು, ಹಲವು ಬಾರಿ ಮನೆಯಲ್ಲಿ ಶ್ರದ್ಧಾ ಜೊತೆಯಲ್ಲಿ ಮದ್ಯ ಸೇವನೆ ಮಾಡಿ ಜಗಳ ಮಾಡಿರುವುದಾಗಿ ಹೇಳಿಕೊಂಡಿದ್ದಾನೆ.

ಇದೇ ವೇಳೆ ಅಫ್ತಾಬ್ ತನ್ನ ಹೇಳಿಕೆಯನ್ನು ಬದಲಿಸಿದ್ದು, ಶ್ರದ್ಧಾ ದೇಹವನ್ನು 35 ಭಾಗವಲ್ಲ ಬದಲಿಗೆ 16 ಭಾಗಗಳಾಗಿ ತುಂಡರಿಸಿ ಫ್ರಿಡ್ಜ್ ನಲ್ಲಿ ತುಂಬಿದ್ದಾಗಿ ಹೇಳಿದ್ದಾನೆ. ಆ ಭೀಕರ ಕೃತ್ಯದ ವಿವರಣೆ ನೀಡಿರುವ ಆರೋಪಿ , ಸೊಂಟದ ಕೆಳಭಾಗದಿಂದ ಕಾಲಿನವರೆಗೆ ಮೂರು ಭಾಗಗಳಾಗಿ ಮಾಡಿದರೆ, ಮೇಲಿನ ದೇಹ ಮತ್ತು ಒಳ ಭಾಗಗಳನ್ನು 13 ಭಾಗಗಳಾಗಿ ಕತ್ತರಿಸಿರುವುದಾಗಿ ಹೇಳಿದ್ದು, ತಲೆಯನ್ನು ಗುರುತು ಸಿಗದ ಹಾಗೇ ಸುಟ್ಟು ಎಸೆದಿದ್ದು, ಅದನ್ನು ಕತ್ತಿರಿಸುವ ಪ್ರಯತ್ನ ಮಾಡಿಲ್ಲ ಎಂಬುದಾಗಿ ಹೇಳಿಕೊಂಡಿದ್ದಾನೆ.

ಮಂಪರು ಪರೀಕ್ಷೆ ನಿರ್ಧಾರದ ಬಳಿಕ ಅಫ್ತಾಬ್ ತನ್ನ ಹೇಳಿಕೆಯಲ್ಲಿ ಮಹತ್ವದ ಹೇಳಿಕೆ ಬದಲಿಸಿದ್ದು ಇದು ತನಿಖೆಯ ದಿಕ್ಕನ್ನು ಬದಲಿಸುವ ತಂತ್ರವೇ ಎಂಬ ಅನುಮಾನ ಹುಟ್ಟುಹಾಕಿದೆ. ಅಥವಾ ಈ ಕೃತ್ಯಕ್ಕೇ ತೇಪೆ ಹಾಕಿ ಮುಚ್ಚಲು ಬಳಸಿಕೊಳ್ಳುತ್ತಿರುವ ಸರಳ ಮಾರ್ಗವೇ ಎಂಬ ಪ್ರಶ್ನೆ ಸಹಜವಾಗಿ ಮೂಡಿಸಿದೆ.
ಈಗಾಗಲೇ ಪೊಲೀಸರು 13 ಭಾಗಗಳನ್ನು ಗುರುತಿಸಿದ್ದು, ತಲೆ ಬರುಡೆಯನ್ನು ಪತ್ತೆ ಹಚ್ಚಿ ಡಿಎನ್‍ಎ ಟೆಸ್ಟ್‌ಗೆ ಕಳುಹಿಸಿದೆ. ಈ ವರದಿಗಾಗಿಯೂ ಪೊಲೀಸರು ಕಾಯುತ್ತಿದ್ದಾರೆ.

ಶ್ರದ್ಧಾ ಮೃತ ದೇಹ ಪತ್ತೆ ಮಾಡುವ ನಿಟ್ಟಿನಲ್ಲಿ ದೆಹಲಿ ಪೊಲೀಸ್ ಮಹಾ ನಿರ್ದೇಶಕರು ಮೆಹ್ರೋಲಿ ಸುತ್ತಲಿನ 176 ಪೊಲೀಸ್ ಠಾಣೆಗಳಿಗೆ ನೋಟಿಸ್ ನೀಡಿದ್ದು, ಮೇ 18 ರಿಂದ ಜುಲೈ ಅಂತ್ಯದ ಅವಧಿಯಲ್ಲಿ ದೆಹಲಿಯಲ್ಲಿ ಪತ್ತೆಯಾದ ಗುರುತು ಸಿಗದ ಹೆಣ್ಣು ದೇಹಗಳ ಮಾಹಿತಿಯನ್ನು ತಿಳಿಸುವಂತೆ ಸೂಚನೆ ಹೊರಡಿಸಿದ್ದಾರೆ. ಈ ಮೂಲಕ ಶ್ರದ್ಧಾಳ ಬಾಕಿ ದೇಹಕ್ಕಾಗಿ ಶೋಧ ಕಾರ್ಯ ತೀವ್ರವಾಗಿದೆ.

ಅಫ್ತಾಬ್ ವಿಚಾರಣೆ ವೇಳೆ ಪದೇ ಪದೇ ಹೇಳಿಕೆ ಬದಲಿಸಿ ಪೊಲೀಸರನ್ನೇ ಗೊಂದಲಕ್ಕೀಡಾಗಿಸಿದ್ದು, ಈಗಾಗಲೇ ಮಂಪರು ಪರೀಕ್ಷೆ ನಡೆಸಲು ನ್ಯಾಯಲಯ ಅನುಮತಿ ನೀಡಿದ್ದು, ಅಫ್ತಾಬ್ ಕೂಡಾ ಒಪ್ಪಿಗೆ ಸೂಚಿಸಿದ್ದಾನೆ. ತಜ್ಞರ ಸಮ್ಮುಖದಲ್ಲಿ ಪರೀಕ್ಷೆ ನಡೆಸಲು ಪೊಲೀಸರು ತಯಾರಿ ಮಾಡಿಕೊಳುತ್ತಿದ್ದು, ಮಂಪರು ಪರೀಕ್ಷೆಯ ಬಳಿಕವಷ್ಟೆ ಆರೋಪಿಯ ಹೇಳಿಕೆ ಹಾಗೂ ಸತ್ಯಾ ಸತ್ಯತೆಯ ನೈಜ ಚಿತ್ರಣ ಹೊರಬೀಳಲಿದೆ.

RELATED ARTICLES

Most Popular

Recent Comments