2
ಬೆಳ್ತಂಗಡಿ: ಧರ್ಮಸ್ಥಳಕ್ಕೆ ವಿವಾಹ ಕಾರ್ಯಕ್ರಮಕ್ಕೆಂದು ಬಂದ ವ್ಯಕ್ತಿಯೊಬ್ಬರು ವಾಪಸ್ ಮನೆಗೆ ಹೋಗದೆ ನಾಪತ್ತೆಯಾದ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ನಿವಾಸಿ ಮಂಜುನಾಥ (47) ಅವರ ಮಗಳ ಮದುವೆಗೆಂದು ಮನೆಯವರ ಜೊತೆ ಧರ್ಮಸ್ಥಳಕ್ಕೆ ಬಂದಿದ್ದು, ವಾಪಸು ಮನೆಗೆ ತೆರಳದೆ ಕಾಣೆಯಾಗಿರುತ್ತಾರೆ. ಈ ಕುರಿತು ದಿನೇಶ್ ಪಿ ಎನ್ನುವವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ.
