Home News Koppala: ರೀಲ್ಸ್ ಗಾಗಿ 20 ಅಡಿ ಎತ್ತರದಿಂದ ನದಿಗೆ ಜಿಗಿದ ವೈದ್ಯೆ ನೀರುಪಾಲು

Koppala: ರೀಲ್ಸ್ ಗಾಗಿ 20 ಅಡಿ ಎತ್ತರದಿಂದ ನದಿಗೆ ಜಿಗಿದ ವೈದ್ಯೆ ನೀರುಪಾಲು

Hindu neighbor gifts plot of land

Hindu neighbour gifts land to Muslim journalist

Koppala: ತುಂಗಭದ್ರಾ ನದಿಗೆ ಬಂಡೆಯ ಮೇಲಿಂದ ಜಿಗಿದು ಈಜಲು ಹೋದ ಯುವ ವೈದ್ಯೆ ನೀರು ಪಾಲಾದ ಘಟನೆ ಕೊಪ್ಪಳ (koppala) ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ನಡೆದಿದೆ.

ಹೈದರಬಾದ್​ ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ 26 ವರ್ಷದ ಅನನ್ಯರಾವ್​ ಇವರು ಸ್ನೇಹಿತರ ಜೊತೆ ಈಜಲು ಹೋಗಿದ್ದರು. ಈ ವೇಳೆ ಅನನ್ಯರಾವ್ ಅವರು ಬಂಡೆಯ ಮೇಲೆ ನಿಂತು ನೀರಿಗೆ ಹಾರಿದ್ದಾರೆ. ಈ ವೇಳೆ ನೀರಿನ ಹರಿವು ಹೆಚ್ಚಾಗಿದ್ದರಿಂದ ಈಜಲು ಸಾಧ್ಯವಾಗದೇ ಮುಳುಗಿದ್ದಾರೆ. ರೀಲ್ಸ್ ಗಾಗಿ ವಿಡಿಯೋ ಮಾಡುತ್ತಿದ್ದರು ಎನ್ನಲಾಗಿದೆ.

ದೂರದಲ್ಲಿ ನಿಂತಿದ್ದ ವ್ಯಕ್ತಿಯೋರ್ವ ಒನ್ ಟು ತ್ರಿ ಜಂಪ್ ಎಂದು ಹೇಳಿದ ತಕ್ಷಣ ಅನನ್ಯರಾವ್ ನದಿಗೆ ಜಿಗಿದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನು ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ವೈದ್ಯೆಗಾಗಿ ಶೋಧ ಕಾರ್ಯ ನಡೆಸಿದ್ದಾರೆ.