ಶ್ರೀರಾಮ ಜನ್ಮಭೂರಿ ತೀರ್ಥ ಕ್ಷೇತ್ರ ಟ್ರಸ್ಟ್ನ ಕಠಿಣ ನಿಯಮಗಳಿಗೆ ಬೇಸತ್ತು ಬ್ಯಾಂಕ್ನಿಂದ ನಿಯೋಜನೆಗೊಂಡಿದ್ದ 23 ಮಂದಿ ಸಿಬ್ಬಂದಿ ತಮ್ಮ ಕೆಲಸಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಬ್ಯಾಂಕ್ಗಳ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು. ಆದರೆ ಇತ್ತೀಚೆಗೆ ಜಾರಿಗೆ ತಂದ ಈ ಹೊಸ ನಿಯಮಗಳು ಹಾಗೂ ಪೊಲೀಸರ ತಪಾಸಣಾ ಶೈಲಿ ತಮಗೆ ಮಾಡಿದ ಅವಮಾನ ಮತ್ತು ಕಿರುಕುಳ ಎಂದು ಭಾವಿಸಿದ 23 ಮಂದಿ ಸಿಬ್ಬಂದಿ ಒಟ್ಟಾಗಿ ರಾಜೀನಾಮೆ ನೀಡಿದ್ದಾರೆ. ಭದ್ರತೆಯ ಹೆಸರಿನಲ್ಲಿ ತಮ್ಮ ಪ್ರಾಮಾಣಿಕತೆಯನ್ನು ಶಂಕಿಸಲಾಗುತ್ತಿದೆ ಎಂದು ದೂರಿದ್ದಾರೆ.
