Home latest ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Hindu neighbor gifts plot of land

Hindu neighbour gifts land to Muslim journalist

ಶಿವಮೊಗ್ಗ: ಜವಾಹರ್‌ಲಾಲ್ ನೆಹರೂ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿಯೊಬ್ಬ, ಹಾಸ್ಟೆಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ನಡೆದಿದೆ.

ನೇಣು ಬಿಗಿದುಕೊಂಡ ವಿದ್ಯಾರ್ಥಿ ಕಲುಬುರಗಿ ಮೂಲಕ ಸಂದೀಪ್ ಎಂದು ಗುರುತಿಸಲಾಗಿದೆ.

ಮೃತ ಸಂದೀಪ್ ಜೆಎನ್‌ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ ವಿಭಾಗದ ಮೂರನೇ ಸೆಮಿಸ್ಟರ್ ಓದುತ್ತಿದ್ದನು. ಮೇ 13ರಂದು ಪರೀಕ್ಷೆ ಮುಗಿಸಿದ್ದ ಈತ, ಸ್ನೇಹಿತರೆಲ್ಲರೂ ಊರಿಗೆ ಹೋದರೂ ಈತ ಮಾತ್ರ ಹಾಸ್ಟೆಲ್ ನಲ್ಲಿಯೇ ಉಳಿದಿದ್ದನು.

ನಿನ್ನೆ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಸಂದೀಪ್ ಹಾಸ್ಟೆಲ್ ಕೊಠಡಿಯಿಂದ ಹೊರಗೆ ಬಾರದ ಕಾರಣ, ಸ್ನೇಹಿತರು ಬಾಗಿಲು ಬಡಿದು ನೋಡಿದ್ದಾರೆ. ಆದ್ರೇ ಕೊಠಡಿಯ ಬಾಗಿಲು ತೆಗೆಯದೇ ಇದ್ದಾಗ, ಕಿಟಕಿಯಿಂದ ನೋಡಿದಾಗ ಸಂದೀಪ್ ಹಾಸ್ಟೆಲ್ ಕೊಠಡಿಯಲ್ಲಿನ ಫ್ಯಾನ್ ಗೆ ನೇಣುಬಿಗಿದುಕೊಂಡಿರೋದು ಬೆಳಕಿಗೆ ಬಂದಿದೆ.

ವಿದ್ಯಾರ್ಥಿ ಸಂದೀಪ್ ನ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ವಿನೋಬ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.