Home » ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಜೈನ್ ಸಹಿತ ನಾಲ್ವರಿಗೆ ನಿರೀಕ್ಷಣಾ ಜಾಮೀನು ಮಂಜೂರು

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಜೈನ್ ಸಹಿತ ನಾಲ್ವರಿಗೆ ನಿರೀಕ್ಷಣಾ ಜಾಮೀನು ಮಂಜೂರು

0 comments

ಬೆಳ್ತಂಗಡಿ: ಗುರುವಾಯನಕೆರೆಯ ಇನ್ಫಿನಿಟಿ ಲರ್ನಿಂಗ್ ಫೌಂಡೇಶನ್‌ನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಮತ್ತು ಮೂವರು ಸದಸ್ಯರಿಗೆ ಮಂಗಳೂರಿನ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಶಿಕ್ಷಣ ಇಲಾಖೆಗೆ ಕಟ್ಟಡದ ಬೆಂಕಿ ಸುರಕ್ಷತಾ ಪ್ರಮಾಣಪತ್ರವನ್ನು ನಕಲಿಯಾಗಿ ಸೃಷ್ಟಿಸಿ ಸಲ್ಲಿಸಿದ ಆರೋಪದಡಿ ಡಿಡಿಪಿಐ ಶಶಿಧರ ಜಿ.ಎಸ್.ಅವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ವಿ.ಎನ್. ಜಗದೀಶ್ ಅವರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ.

ಫೌಂಡೇಶನ್‌ ಅಧ್ಯಕ್ಷ ಬಿ. ಸುಮಂತ್ ಕುಮಾರ್ ಜೈನ್ ಮತ್ತು ಸದಸ್ಯರಾದ ಬಿ. ಸಹನಾ ಜೈನ್, ಸತೀಶ್ ಕುಮಾ‌ರ್ ಜೈನ್ ಹಾಗೂ ಶುಭಲತಾ ಅವರಿಗೆ ಜಾಮೀನು ಮಂಜೂರು ಮಾಡಲಾಗಿದ್ದು ಒಂದು ವೇಳೆ ಬಂಧನಕ್ಕೊಳಗಾದರೆ ತಲಾ 50 ಸಾವಿರ ರೂಪಾಯಿಗಳ ವೈಯಕ್ತಿಕ ಬಾಂಡ್ ಪಡೆಯುವ ಮೂಲಕ ಇವರನ್ನು ಬಿಡುಗಡೆ ಮಾಡಬೇಕು ಎಂದು ನ್ಯಾಯಾಧೀಶರು ಪೊಲೀಸರಿಗೆ ಸೂಚಿಸಿದ್ದಾರೆ. ಅಲ್ಲದೆ ತನಿಖಾಧಿಕಾರಿಯೊಂದಿಗೆ ಆರೋಪಿಗಳು ಸಹಕರಿಸಬೇಕು, ಸಾಕ್ಷಿ ನಾಶಪಡಿಸಬಾರದು ಎಂದು ಷರತ್ತು ವಿಧಿಸಲಾಗಿದೆ.

You may also like