Home » Darshan: ದರ್ಶನ್ ಜಾಮೀನಿನ ಬಗ್ಗೆ ಖ್ಯಾತ ಜ್ಯೋತಿಷಿ ಭವಿಷ್ಯ – ರಿಲೀಸ್ ಯಾವಾಗ ದಾಸ?

Darshan: ದರ್ಶನ್ ಜಾಮೀನಿನ ಬಗ್ಗೆ ಖ್ಯಾತ ಜ್ಯೋತಿಷಿ ಭವಿಷ್ಯ – ರಿಲೀಸ್ ಯಾವಾಗ ದಾಸ?

0 comments

Darshan : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬೆಂಗಳೂರು ನಗರದ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಈ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ನಟ ದರ್ಶನ್‌ಗೆ ಯಾವಾಗ ಜೈಲು ವಾಸದಿಂದ ಮುಕ್ತಿ ಸಿಗುತ್ತದೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಈ ನಡುವೆ ದರ್ಶನ್‌ ಜೈಲಿನಿಂದ ಯಾವಾಗ ಹೊರ ಬರಲಿದ್ದಾರೆ ಎಂದು ಖ್ಯಾತ ಜ್ಯೋತಿಷಿಯೊಬ್ಬರು ಭವಿಷ್ಯ ನುಡಿದಿದ್ದಾರೆ.

ಹೌದು, ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ ಅವರು 2026 ಜೂನ್‌ ವೇಳೆಗೆ ದರ್ಶನ್‌ ಜೈಲಿನಿಂದ ಹೊರ ಬರಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಸದ್ಯ ನಟ ದರ್ಶನ್‌ ಬಗ್ಗೆ ಟ್ವೀಟ್‌ ಮಾಡಿರುವ ಪ್ರಶಾಂತ್ ಕಿಣಿ, ” ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಜೂನ್ 2026 ರ ಒಳಗೆ ಜಾಮೀನು ಸಿಗಲಿದೆ. ಇದು ನೂರಕ್ಕೆ ನೂರು ಸತ್ಯ ” ಎಂದಿದ್ದಾರೆ. ಅಚ್ಚರಿ ಅಂದ್ರೆ ಇದೇ ಜ್ಯೋತಿಷಿಯು ರಾಜಕಾರಣಿಯೊಬ್ಬರು ಸಾವಿಗೀಡಾಗುತ್ತಾರೆ ಎಂದು ಭವಿಷ್ಯ ನುಡಿದ ಬೆನ್ನಲ್ಲೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮೃತಪಟ್ಟಿದ್ದರು. 

ನಟ ದರ್ಶನ್‌ಗೆ ಜಾಮೀನು ಸಿಗಲು ಸಾಧ್ಯವೆ?

ರೇಣುಕಾಸ್ವಾಮಿ ಕೊಲೆಯಾದ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದ ನಟ ದರ್ಶನ್‌ಗೆ ವೈದ್ಯಕೀಯ ಕಾರಣಗಳಿಗೆ ಬಂಧನವಾದ 6 ತಿಂಗಳ ಬಳಿಕ ಹೈಕೋರ್ಟ್‌ ಜಾಮೀನು ನೀಡಿತ್ತು. ಕೊನೆಗೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಸೇರಿದಂತೆ ಹಲವು ಆರೋಪಿಗಳಿಗೂ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನೆ ಮಾಡಿ ಕರ್ನಾಟಕ ಪೊಲೀಸರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿ ಜಾಮೀನು ರದ್ದು ಮಾಡಿಸಿದ್ದರು. ಮತ್ತೆ ಬಂಧನವಾಗಿ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಸದ್ಯ ಕೇಸ್‌ನ ಸಾಕ್ಷಿ ವಿಚಾರಣೆಯು ನಡೆಯುತ್ತಿದ್ದು, ಆರೋಪಿಗಳ ವಿಚಾರಣೆಯ ಬಳಿಕ ಬಲವಾದ ಸಾಕ್ಷಿಗಳು ಸಾಭೀತಾಗದಿದ್ದರೆ ಜಾಮೀನು ಸಿಗುವ ಸಾಧ್ಯತೆ ಇದೆ.

banner

You may also like