

ಚೆಕ್ಬೌನ್ಸ್ ಪ್ರಕರಣಕ್ಕೆ ಕುರಿತಂತೆ ಬಾಲಿವುಡ್ ಹಾಸ್ಯನಟ ರಾಜ್ಪಾಲ್ ಯಾದವ್ ಅವರು ತಿಹಾರ್ ಜೈಲಿನ ಅಧಿಕಾರಿಗಳ ಎದುರು ಶರಣಾಗಿದ್ದಾರೆ. ಗುರುವಾರ ನಾಲ್ಕು ಗಂಟೆಗೆ ಅವರು ಜೈಲಿಗೆ ಬಂದಿದ್ದು, ನಂತರ ಅಧಿಕಾರಿಗಳು ತಮ್ಮ ಪ್ರಕ್ರಿಯೆಯನ್ನು ಮಾಡಿದ್ದಾರೆ. ಈಗ ಇವರು ಜೈಲಿನಲ್ಲಿದ್ದಾರೆ.
ಮುರಳಿ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ರಾಜ್ಪಾಲ್ ವಿರುದ್ಧ ಕೇಸನ್ನು ದಾಖಲು ಮಾಡಿತ್ತು. ನಟ ಹಾಗೂ ಆತನ ಪತ್ನಿ ಕೊಟ್ಟ ಚೆಕ್ಬೌನ್ಸ್ನ್ನು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ. 2018 ರಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಈ ಚೆಕ್ಬೌನ್ಸ್ ಪ್ರಕರಣದಲ್ಲಿ ರಾಜ್ಪಾಲ್ ಯಾದವ್ ಹಾಗೂ ಆತನ ಪತ್ನಿಯನ್ನು ಅಪರಾಧಿ ಎಂದು ಘೋಷಣೆ ಮಾಡಿತ್ತು. 2019 ರಲ್ಲಿ ಸೆಷನ್ ಕೋರ್ಟ್ ಈ ಆದೇಶವನ್ನು ಎತ್ತಿ ಹಿಡಿಯಿತು.
2019ರಲ್ಲಿ ಈ ಪ್ರಕರಣವನ್ನು ದೆಹಲಿ ಕೋರ್ಟ್ನಲ್ಲಿ ರಾಜ್ಪಾಲ್ ಅವರು ಪ್ರಶ್ನೆ ಮಾಡಿದ್ದು, ಸೆಟಲ್ಮೆಂಟ್ಗೆ ದಾರಿ ಹುಡುಕುತ್ತಿದ್ದೇವೆ ಎಂದು ಹೇಳಿದ ಕಾರಣ 2024 ರಲ್ಲಿ ನಟನಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿತ್ತು. ಆದರೆ ನಟ ಹಣವನ್ನು ಹಿಂದಿರುಗಿಸಿರಲಿಲ್ಲ. ಹೀಗಾಗಿ ಕೋರ್ಟ್ ಈ ಕುರಿತು ಆದೇಶ ಹೊರಡಿಸಿದೆ. ಹೆಚ್ಚುವರಿ ಕಾಲ ಕೊಟ್ಟರೆ ಹಣ ಹೊಂದಿಸುವುದಾಗಿ ರಾಜ್ಪಾಲ್ ಪರ ವಕೀಲರು ಹೇಳಿದ್ದು, ಇದಕ್ಕೆ ಹೈಕೋರ್ಟ್ ನಿರಾಕರಿಸಿತ್ತು.