ಕಂಬಳದ ಖ್ಯಾತ ನಿರೂಪಕ ಹಾಗೂ ಪುತ್ತೂರು ಭೂ ನ್ಯಾಯ ಮಂಡಳಿ ಸದಸ್ಯ ನಿರಂಜನ ರೈ ಮಠಂದಬೆಟ್ಟು ಅವರು ಪುತ್ತೂರು ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆಯುತ್ತಿದ್ದ ಮಂಡಳಿ ಸಭೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಅವರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಕಂಬಳದ ಖ್ಯಾತ ವೀಕ್ಷಕ ವಿವರಣೆಗಾರರೂ ಆಗಿರುವ ನಿರಂಜನ್ ರೈ ಗುರುತಿಸಿಕೊಂಡಿದ್ದರು. ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆ ಕುಸಿದು ಬಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ಅವರು ಸಾವನಪ್ಪಿದ್ದರು ಎಂದು ವೈದ್ಯರು ತಿಳಿಸಿದ್ದಾರ.
ಉಪ್ಪಿನಂಗಡಿ ಸಮೀಪದ ಮಠಂತಬೆಟ್ಟು ನಿವಾಸಿಯಾಗಿದ್ದ ನಿರಂಜನ ರೈಯವರು ಕೋಡಿಂಬಾಡಿ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಅಲ್ಲದೆ, ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಅವರು ಕಂಬಳ ಸ್ಪರ್ಧೆಗಳಲ್ಲಿ ವೀಕ್ಷಕ ವಿವರಣೆಗಾರರಾಗಿ ಪರಿಚಿತರಾಗಿದ್ದರು. ಕಂಬಳದ ಕುರಿತು ಹೊಂದಿದ್ದ ಅಪಾರ ಜ್ಞಾನ, ಸ್ಪಷ್ಟ ನಿರೂಪಣೆ ಹಾಗೂ ವಿಶಿಷ್ಟ ಶೈಲಿಯಿಂದ ಕಂಬಳ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

